SHIVAMOGGA LIVE NEWS |6 JANUARY 2023
HOSANAGARA : ಕುಟುಂಬ ಸಹಿತ ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಆಗಮಿಸಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಹೃದಯಾಘಾತದಿಂದ ಲಾಡ್ಜ್ ನಲ್ಲಿ (lodge) ಮೃತಪಟ್ಟಿದ್ದಾರೆ.
ಬೆಂಗಳೂರು ಆನೆಪಾಳ್ಯ ನಿವಾಸಿ ಮುನಿರಾಜು (40) ಮೃತರು. ಹೊಸನಗರದ ಲಾಡ್ಜ್ ಒಂದರಲ್ಲಿ ಕುಟುಂಬದೊಂದಿಗೆ ಉಳಿದುಕೊಂಡಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಮುನಿರಾಜು ಅವರು ಕೊನೆಯುಸಿರೆಳೆದಿದ್ದಾರೆ.
ಸಿಗಂದೂರಿಗೆ ತೆರಳಬೇಕಿತ್ತು
ಮುನಿರಾಜು, ತಮ್ಮ ಪತ್ನಿ, ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಿಂದ ಹೊರಟು ಹೊರನಾಡ, ಶೃಂಗೇರಿಗೆ ಭೇಟಿ ನೀಡಿದ್ದರು. ಅಲ್ಲಿಂದ ಸಿಗಂದೂರಿಗೆ ತೆರಳುತ್ತಿದ್ದರು. ಕತ್ತಲಾಗಿದ್ದರಿಂದ ಹೊಸನಗರದಲ್ಲಿ ಲಾಡ್ಜ್ ನಲ್ಲಿ (lodge) ಉಳಿದುಕೊಂಡಿದ್ದರು. ಗುರುವಾರ ಬೆಳಗಿನ ಜಾವ ಮುನಿರಾಜು ಅವರಿಗೆ ಎದೆ ಉರಿ ಕಾಣಿಸಿಕೊಂಡಿದೆ.
ಇದನ್ನೂ ಓದಿ – ಲಾರಿಗೆ ಹಿಂಬದಿಯಿಂದ ಡಿಕ್ಕಿ, ಗೌತಮಪುರಕ್ಕೆ ಹೋಗುತ್ತಿದ್ದ ಸವಾರರು ಸ್ಥಳದಲ್ಲೇ ಸಾವು
ರೂಂ ಬಾಯ್ ನೆರವಿನಿಂದ ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮುನಿರಾಜು ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200