SHIVAMOGGA LIVE NEWS | 2 SEPTEMBER 2023
RIPPONPETE : ವಿದ್ಯಾರ್ಥಿಯೊಬ್ಬನ ಬ್ಯಾಗಿನಲ್ಲಿ ನಾಗರಹಾವು (Snake) ಪತ್ತೆಯಾಗಿದೆ. ಸಹಪಾಠಿಯ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.
ಹೊಸನಗರ ತಾಲೂಕು ರಿಪ್ಪನ್ಪೇಟೆ ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ಸಂಭವಿಸಿದೆ. ತರಗತಿಯಲ್ಲಿ ವಿದ್ಯಾರ್ಥಿ ಭುವನ್ ತನ್ನ ಬ್ಯಾಗಿನಿಂದ ಪುಸ್ತಕ ತೆಗೆಯಲು ಜಿಪ್ ತೆಗೆದಾಗ ನಾಗರ ಹಾವು ಇರುವುದು ಗೊತ್ತಾಗಿದೆ. ಪಕ್ಕದಲ್ಲಿ ಕುಳಿತಿದ್ದ ಸಹಪಾಠಿ ಮಣಿಕಂಠನಿಗೆ ವಿಚಾರ ತಿಳಿಸಿದ್ದ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ಹಾಡು ರೆಡಿ | ಪಂಪ್ ಹೌಸ್ನಲ್ಲಿ ಮೋಟರ್ ನಾಪತ್ತೆ – 3 ಫಟಾಫಟ್ ನ್ಯೂಸ್
ಕೂಡಲೆ ಮಣಿಕಂಠ, ಭುವನ್ ಬ್ಯಾಗಿನ (Bag) ಜಿಪ್ ಹಾಕಿ ಹಾವು ಹೊರಗೆ ಬಾರದಂತೆ ಮುಂಜಾಗ್ರತೆ ವಹಿಸಿದ್ದಾನೆ. ಬಳಿಕ ಪಾಠ ಮಾಡುತ್ತಿದ್ದ ಶಿಕ್ಷಕರಿಗೆ ವಿಚಾರ ತಿಳಿಸಿದ್ದ. ಕೂಡಲೆ ಇತರೆ ಶಿಕ್ಷಕರು, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದರು. ಶಾಲೆಯ ಸಮೀಪದಲ್ಲೇ ಇರುವ ಭುವನ್ ಮನೆಗೆ ಮಾಹಿತಿ ತಲುಪಿಸಿ, ಪೋಷಕರಿಗೆ ವಿಚಾರ ಮುಟ್ಟಿಸಲಾಯಿತು. ಬಳಿಕ ಶಿಕ್ಷಕರು, ಗ್ರಾಮಸ್ಥರು ಹಾವನ್ನು ಸಮೀಪದ ಕಾಡಿಗೆ ಕೊಂಡೊಯ್ದು ಸುರಕ್ಷಿತವಾಗಿ ಬಿಟ್ಟಿದ್ದಾರೆ. ಮಣಿಕಂಠನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ – ಭದ್ರಾವತಿಯ ಇಬ್ಬರು ಶಿಕ್ಷಕರು ಅಮಾನತು, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200