ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOSANAGARA | 27 ನವೆಂಬರ್ 2019
ಪತ್ನಿಯ ನಿರ್ಲಕ್ಷ್ಯ ಮತ್ತು ದುಡುಕುತನದಿಂದಾಗಿ ಅಪಘಾತ ಸಂಭವಿಸಿದೆ. ಆಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪತಿಯೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹೊಸನಗರದ ರಾಮಚಂದ್ರಾಪುರ ಗ್ರಾಮದ ಬಳಿ ಮಂಗಳವಾರ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಕಾರು ಫುಲ್ ಜಖಂ
ಕಾರು ಸೇತುವೆಯಿಂದ ಕೆಳಗೆ ಪಲ್ಟಿಯಾಗಿ ಬಿದ್ದಿದೆ. ಕಾರಿನ ಮುಂಭಾಗ, ಹಿಂಬದಿ ಸಂಪೂರ್ಣ ಜಖಂ ಆಗಿದೆ. ಪಲ್ಟಿ ಆಗಿ ಬಿದ್ದಿದ್ದರಿಂದ ಕಾರಿನ ಮೇಲ್ಬಾಗಕ್ಕೂ ಹಾನಿಯಾಗಿದೆ.
ಹೆಂಡತಿ ವಿರುದ್ಧವೇ ಕಂಪ್ಲೇಂಟ್
ಉಡುಪಿಯ ಹೆಬ್ರಿಯ ನಾಗರಾಜ್ ತಮ್ಮ ಪತ್ನಿ ಮಂಜುಳಾ, ಮಗ ಈಶಾನ್, ಪತ್ನಿಯ ಅಕ್ಕನ ಮಗಳು ಸುಪ್ರಭ ಅವರೊಂದಿಗೆ ಸಂಬಂಧಿಯೊಬ್ಬರ ಮನೆಗೆ ತೆರಳುತ್ತಿದ್ದರು. ಪತ್ನಿ ಮಂಜುಳಾ ಅವರೆ ಕಾರು ಚಲಾಯಿಸುತ್ತಿದ್ದರು ಎಂದು ನಾಗರಾಜ್ ಅವರು ದೂರಿನಲ್ಲಿ ತಿಳಿಸಿದ್ದಾರೆ. ಪತ್ನಿಯ ನಿರ್ಲಕ್ಷ್ಯದಿಂದಾಗಿಯೇ ಅಪಘಾತ ಸಂಭವಿಸಿದೆ. ಹಾಗಾಗಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಕಂಪ್ಲೇಂಟ್ ನೀಡಿದ್ದಾರೆ.
ಘಟನೆ ಸಂಬಂಧ ಹೊಸನಗರ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
A Car met with an accident in Ramachandrapura Village in Hosanagara Taluk. Husband complained about his wife’s negligence driving and requested to take action.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





