ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 NOVEMBER 2023
HOSANAGARA : ಗೋಪೂಜೆ ಸಂದರ್ಭ ಹಸುವೊಂದು (Cow) ಚಿನ್ನದ ಸರ ನುಂಗಿದ್ದು ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆಯಲಾಗಿದೆ. ಹೊಸನಗರ ತಾಲೂಕು ಮತ್ತಿಮನೆ ಗ್ರಾಮದಲ್ಲಿ ಘಟನೆ ನಡೆದಿದೆ.
ವಿನಾಯಕ ಉಡುಪ ಅವರ ಸಹೋದರ ಶ್ಯಾಮ್ ಉಡುಪ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಈಚೆಗೆ ಗೋ ಪೂಜೆ ಸಂದರ್ಭ ಪೂಜೆಗೆ ಇಟ್ಟಿದ್ದ ಚಿನ್ನದ ಸರ ನಾಪತ್ತೆಯಾಗಿತ್ತು. ಎಲ್ಲಡೆ ಹುಡುಕಿದ ಬಳಿಕ ಮನೆಯಲ್ಲಿನ ಹಸು (Cow) ನುಂಗಿದೆ ಎಂದು ಕುಟುಂಬದವರು ಖಚಿತಪಡಿಸಿಕೊಂಡಿದ್ದರು.
ಇದನ್ನೂ ಓದಿ- BREAKING NEWS – ಕೋಟೆ ಮಾರಿಕಾಂಬ ದೇವಿ ಜಾತ್ರೆ ದಿನಾಂಕ ಫಿಕ್ಸ್, ಅಧಿಕೃತ ಪ್ರಕಟ
ಚಿನ್ನದ ಸರ ನುಂಗಿದಾಗಿನಿಂದ ಹಸು ಸರಿಯಾಗಿ ಮೇವು ತಿನ್ನುತ್ತಿರಲಿಲ್ಲ ಎನ್ನಲಾಗಿದೆ. ಆತಂಕಗೊಂಡ ಕುಟುಂಬದವರು ಕೋಣಂದೂರಿನ ಹಿರಿಯ ಪಶು ವೈದ್ಯಾಧಿಕಾರಿ ಡಾ. ಆನಂದ ಅವರಿಗೆ ಮಾಹಿತಿ ನೀಡಿದ್ದರು. ಭಾನುವಾರ ಶಸ್ತ್ರಚಿಕಿತ್ಸೆ ನಡೆಸಿ ಚಿನ್ನದ ಸರವನ್ನು ಹೊರತೆಗೆಯಲಾಗಿದೆ. ಹಸು ಮೆಲುಕು ಹಾಕಿ ಜಗಿಯುವಾಗ ಸರ ತುಂಡಾಗಿ ಚೂಪಾಗಿತ್ತು. ಇದು ಹಸುವಿನ ದೇಹದ ರೆಟಿಕ್ಯುಲಮ್ ಭಾಗದಲ್ಲಿ ಸಿಲುಕಿತ್ತು ಎನ್ನಲಾಗಿದೆ. ಸರ ಚೂಪಾಗಿದ್ದರಿಂದ ಗಾಯವಾಗಿ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಇತ್ತು. ಯಶಸ್ವಿ ಚಿಕಿತ್ಸೆ ಮೂಲಕ ಸರವನ್ನು ಹೊರತೆಗೆಯಲಾಗಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






