SHIVAMOGGA LIVE NEWS | 18 NOVEMBER 2023
RIPPONPETE : ಚಾಲಕನ ನಿಯಂತ್ರಣ ತಪ್ಪಿದ ಕಾರು (Car) ಕೆರೆಗೆ ನುಗ್ಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೊಸನಗರ ತಾಲೂಕು ರಿಪ್ಪನ್ಪೇಟೆ ಸಮೀಪದ ತಾವರೆಕೆರೆಯಲ್ಲಿ ಘಟನೆ ಸಂಭವಿಸಿದೆ.
ಕಾರಿನಲ್ಲಿದ್ದವರು ಬೆಂಗಳೂರಿನಿಂದ ರಿಪ್ಪನ್ಪೇಟೆ ಮೂಲಕ ಸೊನಲೆ ಗ್ರಾಮಕ್ಕೆ ತೆರಳುತ್ತಿದ್ದರು. ರಿಪ್ಪನ್ಪೇಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೀದ ತಾವರೆಕೆರೆಗೆ ನುಗ್ಗಿದೆ. ಕಾರಿನಲ್ಲಿ ದಂಪತಿ ಮತ್ತು ಮಗಳು ಇದ್ದರು. ಅವಘಡ ಸಂಭವಿಸುತ್ತಿದ್ದಂತೆ ಮೂವರು ಕಾರಿನಿಂದ ಹೊರಗೆ ಬಂದಿದ್ದಾರೆ. ವಿಷಯ ತಿಳಿದು ಸ್ಥಳೀಯರು ಲಾರಿ ಬಳಸಿ ಕಾರನ್ನು ಕೆರೆಯಿಂದ ಹೊರಗೆ ತೆಗೆದಿದ್ದಾರೆ.
ಇದನ್ನೂ ಓದಿ- GOOD NEWS | ಕೃಷಿ, ತೋಟಗಾರಿಕೆ ವಿವಿಯಲ್ಲಿನ ಬ್ಯಾಡಗಿ ಮೆಣಸಿನಕಾಯಿಯ ಸಂಶೋಧನೆಗೆ ಪೇಟೆಂಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200