ಮರಕ್ಕೆ ಬೈಕ್‌ ಡಿಕ್ಕಿ, ಬೈಕ್‌ನ ಹಿಂಬದಿ ಸವಾರ ಸಾವು

 ಶಿವಮೊಗ್ಗ  LIVE 

ರಿಪ್ಪನ್‌ಪೇಟೆ: ಸವಾರನ ನಿಯಂತ್ರಣ ತಪ್ಪಿದ ಬೈಕ್‌ ಮರಕ್ಕೆ ಡಿಕ್ಕಿ (Fatal Bike Accident) ಹೊಡೆದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡ್ರಿಗೆ ಗ್ರಾಮದಲ್ಲಿ ಭಾನುವಾರ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿಣಸೆ ಗ್ರಾಮದ ನಿವಾಸಿ ಶಿವಪ್ಪ ಎಂಬುವರ ಪುತ್ರ ಮಂಜುನಾಥ (35) ಮೃತ ವ್ಯಕ್ತಿ. ಮಂಜುನಾಥ, ಹೊಸನಗರದಲ್ಲಿ ಗ್ರಾಮಒನ್ ನಡೆಸುತ್ತಿದ್ದರು.

bike-hits-tree-pillion-rider-manjunath-dies

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹಾಡಹಗಲೆ ಶಿಕ್ಷಕಿಯ ಪರ್ಸ್‌ ಕಸಿದು ಎಸ್ಕೇಪ್‌, ಎಲ್ಲಿ? ಹೇಗಾಯ್ತು ಘಟನೆ?

ಗಿಣಸೆ ಗ್ರಾಮದ ರೋಹಿತ್(26) ಗಾಯಗೊಂಡಿದ್ದು, ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment