ರಿಪ್ಪನ್ಪೇಟೆ: ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈಚೆಗೆ ಸದಸ್ಯರು (Members) ಪರಸ್ಪರ ಹಲ್ಲೆ ನಡೆಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸದಸ್ಯರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸದಸ್ಯರಾದ ನಿರೂಪ್ ಕುಮಾರ್ ಹಾಗೂ ಸುಂದರೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾನ್ಯ ಸಭೆಯಲ್ಲಿ ಭ್ರಷ್ಟಾಚಾರ ಹಾಗೂ ಅನಧಿಕೃತ ಲೇಔಟ್ ನಿರ್ಮಾಣದ ವಿಚಾರವಾಗಿ ನಡೆದ ಗದ್ದಲ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.
ಮಾಹಿತಿ ಅರಿತ ಪಿಎಸ್ಐ ಪ್ರವೀಣ್ ತಕ್ಷಣ ಸ್ಥಳಕ್ಕೆ ಬಂದು ಸದಸ್ಯರಿಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಸೂಚಿಸಿ, ಸಮಸ್ಯೆ ಇದ್ದರೆ ಠಾಣೆಗೆ ದೂರು ನೀಡಲು ಸೂಚಿಸಿದ್ದರು. ಗದ್ದಲದ ಕಾರಣ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಮಧ್ಯಾಹ್ನಕ್ಕೆ ಮುಂದೂಡಲಾಗಿತ್ತು. ಈ ಅವಧಿಯಲ್ಲಿ ಸದಸ್ಯರಿಬ್ಬರು ಹಲ್ಲೆ ಮತ್ತು ಪ್ರತಿ ಹಲ್ಲೆ ಕುರಿತು ಪಂಚಾಯಿತಿ ಪಕ್ಕದಲ್ಲೇ ಇದ್ದ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ » ಯುವತಿಯ ಫೇಸ್ಬುಕ್ ರಿಕ್ವೆಸ್ಟ್ ಒಪ್ಪಿದ ಶಿವಮೊಗ್ಗದ ಉದ್ಯಮಿಗೆ ಮುಂದೆ ಕಾದಿತ್ತು ಶಾಕ್

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200