ವಿದ್ಯಾರ್ಥಿಗಳಿಗೆ ವಿತರಿಸಲು ಶಾಲೆಯಲ್ಲಿ ಇರಿಸಿದ್ದ ಯುನಿಫಾರಂ ಬಟ್ಟೆಗೆ ಬೆಂಕಿ

ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 JUNE 2021

ವಿದ್ಯಾರ್ಥಿಗಳಿಗೆ ವಿತರಿಸಲು ಇರಿಸಿದ್ದ ಯುನಿಫಾರಂ ಬಟ್ಟೆಗಳು ಬೆಂಕಿಗೆ ಆಹುತಿಯಾಗಿದೆ. ಶಾಲೆಯ ಕೊಠಡಿಯಲ್ಲಿ ಈ ಸಮವಸ್ತ್ರಗಳನ್ನು ಇರಿಸಲಾಗಿತ್ತು.

ಹೊಸನಗರ ತಾಲೂಕು ಮಾರುತಿಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ಮುಖ್ಯೋಪಾಧ್ಯಾಯರು ಶಾಲೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಸುಮಾರು 300 ವಿದ್ಯಾರ್ಥಿಗಳಿಗೆ ವಿತರಿಸಲು ಬಟ್ಟೆಯನ್ನು ಇರಿಸಲಾಗಿತ್ತು. ಬೆಂಕಿ ಹೊತ್ತಿದ್ದರಿಂದ ಬಟ್ಟೆ ಸಂಪೂರ್ಣವಾಗಿ ಸುಟ್ಟು ಹೋಗಿದೆ ಎಂದು ಶಾಲೆಯ ಆಡಳಿತ ಮಂಡಳಿ ಆರೋಪಿಸಿದ್ದಾರೆ.

Nammur News For Website 2 1 1 1

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆ ಆಡಳಿತ ಮಂಡಳಿ ಮತ್ತು ಸ್ಥಳೀಯರಿಂದ ಮಾಹಿತಿ ಪಡೆದರು.

ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ಅಜಿತ್ ಗೌಡ ಬಡೇನಕೊಪ್ಪ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment