ಶಿವಮೊಗ್ಗದ ಲೈವ್.ಕಾಂ | HOSANAGARA NEWS | 23 ಜನವರಿ 2022
ಪಟಗುಪ್ಪೆ ಸೇತುವೆ ಬಳಿ ನಾಪತ್ತೆ ಆಗಿರುವ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರ ಶೋಧ ಕಾರ್ಯ ಎರಡನೆ ದಿನಕ್ಕೆ ಕಾಲಿಟ್ಟಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಪ್ರಕಾಶ್ ಅವರ ಕಾರು ಪತ್ತೆಯಾದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಶರಾವತಿ ಹಿನ್ನೀರು ಭಾಗದಲ್ಲಿ ಬೆಳಗ್ಗೆಯಿಂದ ಶೋಧ ನಡೆಸಲಾಗುತ್ತಿದೆ.
ಒಂದು ಸುತ್ತು ಮುಕ್ತಾಯ
ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆ ಒಂದು ಸುತ್ತು ಪರಿಶೀಲನೆ ನಡೆಸಿದರು. ಶರಾವತಿ ಹಿನ್ನೀರು ಭಾಗದಲ್ಲಿ ಬೋಟ್ ಮೂಲಕ ಶೋಧ ನಡೆಸಲಾಯಿತು. ಆದರೆ ಈವರೆಗೂ ಸುಳಿವು ಸಿಕ್ಕಿಲ್ಲ. ಸ್ಥಳೀಯ ಮುಳುಗು ತಜ್ಞರು ಕೂಡ ಶೋಧ ಕಾರ್ಯದಲ್ಲಿ ನೆರವಾಗಿದ್ದಾರೆ.
ಈಗ ಮತ್ತೊಂದು ಸುತ್ತಿನ ಕಾರ್ಯಾಚರಣೆ ಆರಂಭಿಸಲಾಗಿದೆ. ಕಾರ್ಯಾಚರಣೆ ವೀಕ್ಷಿಸಲು ಸೇತುವೆ ಮೇಲೆ ಜನ ಸೇರಿದ್ದಾರೆ.
ಇದನ್ನೂ ಓದಿ | ಪ್ರಕಾಶ್ ಟ್ರಾವೆಲ್ಸ್ ಮಾಲೀಕ ನಾಪತ್ತೆ, ಪಟಗುಪ್ಪೆ ಸೇತುವೆ ಮೇಲೆ ಕಾರು, ಮೊಬೈಲ್ ಪತ್ತೆ, ಶರಾವತಿ ಹಿನ್ನೀರಲ್ಲಿ ಶೋಧ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200