ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020
ಕರೋನ ಲಾಕ್ ಡೌನ್ ಹಿನ್ನೆಲೆ ಖರೀದಿದಾರರು ಇಲ್ಲದೆ, ಬೆಲೆಯೂ ಸಿಗದೆ ರೈತರೊಬ್ಬರು ತಾವು ಬೆಳೆದ ಕಬ್ಬಿಗೆ ಬೆಂಕಿ ಹಚ್ಚಿದ್ದಾರೆ. ಒಂದೂವರೆ ಎಕೆರೆಯಲ್ಲಿ ಬೆಳೆದಿದ್ದ ಕಬ್ಬು ಧಗಧಗ ಹೊತ್ತಿ ಉರಿದಿದೆ.
ಹೊಸನಗರ ತಾಲೂಕು ಹಾರಂಬಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ರೈತ ಚಂದ್ರಶೇಖರ್ ಅವರು ತಾವು ಬೆಳೆದ ಜ್ಯೂಸ್ ಕಬ್ಬಿಗೆ ಬೆಂಕಿ ಹಚ್ಚಿದ್ದಾರೆ. ಇವತ್ತು ಬೆಳಗ್ಗೆ ಕಬ್ಬಿಗೆ ಹಚ್ಚಲಾಗಿದೆ.
ಕರೋನ ಲಾಕ್ ಡೌನ್ ಪರಿಣಾಮ ಕಬ್ಬು ಖರೀದಿಗೆ ಯಾರೂ ಬರುತ್ತಿಲ್ಲ. ಇನ್ನು ಕಟಾವು ಮಾಡಿ ಮಾರಾಟಕ್ಕೆ ಕೊಂಡಲಯ್ಯಲು ಸಾದ್ಯವಾಗುತ್ತಿಲ್ಲ. ಇದರಿಂದ ಬೇಸತ್ತು ರೈತ ಚಂದ್ರಶೇಖರ್ ಅವರು ಬೆಳದ ಕಬ್ಬಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಸುಮಾರು ಮೂರು ಲಕ್ಷ ರೂ. ನಷ್ಟವಾಗಿದೆ.
ಫೋಟೊ ಕೃಪೆ | ಮನೋಜ್ ಪಾಟೀಲ್, ಹಾರಂಬಳ್ಳಿ
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200