SHIVAMOGGA LIVE NEWS | 20 JANUARY 2023
RIPPONPETE | ಜಮೀನು ಒಂದರಲ್ಲಿ ಸಂಗ್ರಹಿಸಿ ಇಟ್ಟಿದ್ದ ಸಾಗುವಾನಿ ಮರಗಳ ದಿಮ್ಮಿಗಳು ಮತ್ತು ಸೈಜುಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ವಶಕ್ಕೆ (Raid) ಪಡೆದಿದ್ದಾರೆ. ರಿಪ್ಪನ್ ಪೇಟೆ ಸಮೀಪದ ಮಳವಳ್ಳಿ ಗ್ರಾಮದ ನಾಗರಾಜ ಎಂಬುವವರ ಜಮೀನಿನ ಮೇಲೆ ದಾಳಿ ನಡೆಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಸಾಗರದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ದಾಳಿ (Raid) ನಡೆಸಿ ಲಕ್ಷಾಂತರ ಮೌಲ್ಯದ ಮರದ ದಿಮ್ಮಿಗಳು ಮತ್ತು ಸೈಜುಗಳನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಸಂಚಾರಿ ದಳದ ದಿನೇಶ್, ಗಣೇಶ್, ಗಿರೀಶ್, ಮಹೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ರಾತ್ರಿ ಜಮೀನಿಗೆ ಹೋದವರು ಬೆಳಗ್ಗೆವರೆಗೆ ಮನೆಗೆ ಬರಲಿಲ್ಲ, ಹುಡುಕಿ ಹೋದವರಿಗೆ ಸಿಕ್ಕಿದ್ದು ರೈತನ ಮೃತದೇಹ