ಶಿವಮೊಗ್ಗ ಜಿಲ್ಲೆಯ 3 ತಾಲ್ಲೂಕುಗಳಿಗೆ ಜುಲೈ 7ರಂದು ರಜೆ, ಎಲ್ಲೆಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಮಳೆ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿದ್ದು ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮೂರು ತಾಲೂಕುಗಳಲ್ಲಿ ಜುಲೈ 7ರಂದು ರಜೆ ಘೋಷಣೆ ಮಾಡಿ ಆಯಾ ತಹಾಶೀಲ್ದಾರ್‌ಗಳು ಆದೇಶ ಹೊರಡಿಸಿದ್ದಾರೆ.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ರಜೆ ಘೋಷಣೆ?

ತೀರ್ಥಹಳ್ಳಿ: ಅಂಗನವಾಡಿ, ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ.

himoga-DC-office-and-Police-jeep-in-front-of-office

ಹೊಸನಗರ: ಅಂಗನವಾಡಿ, ಶಾಲೆಗಳು ಮತ್ತು ಪಿ.ಯು ಕಾಲೇಜುಗಳಿಗೆ ತಹಶೀಲ್ದಾರ್ ಭರತ್ ರಾಜ್ ರಜೆ ಘೋಷಿಸಿದ್ದಾರೆ.

ಸಾಗರ: ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಡಾ.ಪ್ರತಿಭಾ ಆದೇಶಿಸಿದ್ದಾರೆ.