HOSANAGARA NEWS, 27 OCTOBER 2024 : ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನುಗಳು (Bee Attack) ದಾಳಿ ನಡಿಸಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಹೊಸನಗರ ತಾಲೂಕು ಬಿದನೂರು ನಗರದಲ್ಲಿ ಶನಿವಾರ ಮಧ್ಯಾಹ್ನ ಮತ್ತು ಸಂಜೆ ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನುಗಳು ದಾಳಿ ನಡೆಸಿವೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮಧ್ಯಾಹ್ನದ ಘಟನೆ
ಚಿಕ್ಕಪೇಟೆಯ ಬಾಷಾ ಎಂಬುವವರ ಮನೆ ಸಮೀಪ ಜೇನು ದಾಳಿ ನಡೆಸಿವೆ. ಬಾಷಾ, ಪತ್ನಿ ಆಸ್ಮಾ ಬಾನು, ಮಕ್ಕಳಾದ ಆರೀಫ್, ಅನೀಫ್ ಎಂಬುವವರು ಗಾಯಗೊಂಡಿದ್ದರು. ನಗರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು.
ಸಂಜೆ ಮತ್ತೆ ದಾಳಿ Bee
ಹೆಜ್ಜೇನುಗಳು ಸಂಜೆ ವೇಳೆಗೆ ಅದೇ ಸ್ಥಳದಲ್ಲಿ ಪುನಃ ದಾಳಿ ನಡೆಸಿದೆ. ಆಗ ಬಾಷಾ ಅವರ ಪುತ್ರ ಆರಿಫ್ ಮೇಲೆ ಮತ್ತೆ ದಾಳಿ ನಡೆಸಿವೆ. ಯಾಸಿನ್, ಹಾಸಿಗೆ ರಿಪೇರಿಗೆ ಬಂದಿದ್ದ ಶಿವಮೊಗ್ಗದ ಹುಸೇನ್ ಸಾಬ್ ಮತ್ತು ಅವರ ಪುತ್ರ ಬಾಬಾ ಸಾಬ್ ಎಂಬುವವರ ಮೇಲೆ ದಾಳಿ ನಡೆಸಿದ್ದವು. ಗಾಯಗೊಂಡಿದ್ದವರು ಕೂಡಲೆ ಗಾಯಾಳುಗಳನ್ನು ನಗರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ » ಕುಂಸಿ ಠಾಣೆಗೆ ಹೋಮ್ ಮಿನಿಸ್ಟರ್ ದಿಢೀರ್ ಭೇಟಿ, ಏನೆಲ್ಲ ಚೆಕ್ ಮಾಡಿದರು?
ಹುಸೇನ್ ಸಾಬ್ ಅವರಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನುಗಳು ದಾಳಿ ನಡೆಸಿರುವ ಪ್ರಕರಣ ಸ್ಥಳೀಯಲ್ಲಿ ಆತಂಕ ಮೂಡಿಸಿದೆ.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





