ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಹೊಸನಗರ: ತಾಲೂಕಿನಾದ್ಯಂತ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಅಂಗನವಾಡಿಗಳು, ಶಾಲಾ-ಕಾಲೇಜುಗಳಿಗೆ ಜುಲೈ 6ರಂದು ರಜೆ ಘೋಷಿಸಿ ಹೊಸನಗರ ತಹಶೀಲ್ದಾರ್ ಭರತರಾಜ್‌ ಆದೇಶ ಹೊರಡಿಸಿದ್ದಾರೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ತಹಶೀಲ್ದಾರ್‌ ಆದೇಶದಲ್ಲಿ ಏನಿದೆ?

ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಮಳೆಯ ಆರ್ಭಟ ಜೋರಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜುಲೈ 6ರಂದು ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ರಜೆಯಿಂದಾಗಿ ವಿದ್ಯಾರ್ಥಿಗಳಿಗೆ ಉಂಟಾಗುವ ಶೈಕ್ಷಣಿಕ ಹಿನ್ನಡೆ ಸರಿದೂಗಿಸಲು, ಇಂದು ನಡೆಯಬೇಕಾಗಿದ್ದ ಪಾಠ-ಪ್ರವಚನಗಳನ್ನು ಮುಂದಿನ ಸಾರ್ವತ್ರಿಕ ರಜೆ ದಿನಗಳಂದು ನಡೆಸಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕಾಲೇಜು ಪ್ರಾಂಶುಪಾಲರಿಗೆ ತಹಶೀಲ್ದಾರ್ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

HOSANAGARA-NEWS-GRAPHICS-BY-SHIVAMOGGA-LIVE

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!