ಹೊಸನಗರದಲ್ಲಿ ಭೀಕರ ಅಪಘಾತ, ಕಾರಿನಲ್ಲಿದ್ದ ಯುವತಿ ಸಾವು, ಸ್ವಲ್ಪದರಲ್ಲಿ ತಪ್ಪಿತು ಭಾರಿ ಅನಾಹುತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 08 JANUARY 2021

ಪಲ್ಟಿಯಾಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಹೊಸನಗರದ ಹೆರೆಟೆಯಲ್ಲಿ ಸಂಭವಿಸಿದೆ. ಯುವತಿ ಸ್ಥಳದಲ್ಲೇ ಮೃತಿಪಟ್ಟಿದ್ದು, ನಾಲ್ಕು ಮಂದಿಗೆ ಗಾಯವಾಗಿದೆ.

ದಾವಣಗೆರೆಯ ಆಂಜನೇಯ ಬಡಾವಣೆಯ ಚಿನ್ಮಯಿ (23) ಮೃತ ದುರ್ದೈವಿ. ಕೋಟೇಶ್ವರದಲ್ಲಿ ಕಾರ್ಯಕ್ರಮವೊಂದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಹೇಗಾಯ್ತು ಅಪಘಾತ?

ಸಿಮೆಂಟ್ ತುಂಬಿದ್ದ ಹತ್ತು ಚಕ್ರದ ಲಾರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ಕಾರು ಕೋಟೇಶ್ವರದಿಂದ ದಾವಣಗೆರೆಗೆ ಮರಳುತ್ತಿತ್ತು. ಹೆರೆಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗುತ್ತಿತ್ತು. ಎದುರಿನಿಂದ ಬರುತ್ತಿದ್ದ ಕಾರು ಲಾರಿಯ ಅಡಿಯಲ್ಲಿ ಸಿಲುಕುವ ಸಾದ್ಯತೆ ಇತ್ತು. ಇದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದು, ಸ್ವಲ್ಪದರಲ್ಲಿ ಲಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ತಲೆಗೆ ತೀವ್ರ ಗಾಯವಾಗಿ ಚಿನ್ಮಯಿ ಮೃತಪಟ್ಟಿದ್ದಾಳೆ.

ಕಾರಿನಲ್ಲಿ ಯಾರೆಲ್ಲ ಇದ್ದರು?

ಎಜುಕೇಷನ್‍ ಕನ್ಸಲ್ಟೆಂಟ್ ಮತ್ತು ಜೆಸಿಐನಲ್ಲಿ ಸಕ್ರಿಯರಾಗಿದ್ದ ದಾವಣಗೆರೆಯ ಶ್ರೀನಿವಾಸ್ ಅವರು, ಕೋಟೇಶ್ವರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಹಿತ ತೆರಳಿದ್ದರು. ಕಾರ್ಯಕ್ರಮದ ಬಳಿಕ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಶ್ರೀನಿವಾಸ್ (54), ಪತ್ನಿ ಬೃಂದಾ (48), ಮಗಳು ಲಾಸ್ಯ (13), ಚಾಲಕ ಶಶಿಧರ್ (24) ಗಾಯಗೊಂಡಿದ್ದಾರೆ. ಮತ್ತೊಬ್ಬ ಮಗಳು ಚಿನ್ಮಯಿ (23) ಮೃತಪಟ್ಟಿದ್ದಾಳೆ. ಕಾರು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದಂತಾಗಿದೆ.

ಹೊಸನಗರ ಠಾಣೆ ಸಿಪಿಐ ಜಿ.ಕೆ.ಮಧುಸೂದನ್, ಪಿಎಸ್ಐ ಶಿವರಾಜ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್  shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment