| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 DECEMBER 2020
ಬೆಂಗಳೂರು – ಶಿವಮೊಗ್ಗ – ತಾಳಗುಪ್ಪ ಇಂಟರ್ಸಿಟಿ ರೈಲು ಹಳಿ ತಪ್ಪಿದೆ. ಹೊಸನಗರ ತಾಲೂಕು ಸೂಡೂರು ಬಳಿ ಘಟನೆ ಸಂಭವಿಸಿದೆ. ಲೋಕೊ ಪೈಲೆಟ್ (ಚಾಲಕ) ಸಮಯಪ್ರಜ್ಞೆಯಿಂದಾಗಿ ದೊಡ್ಡ ಅಪಾಯ ತಪ್ಪಿದೆ.
ಹಳಿ ತಪ್ಪಿದ್ದು ಹೇಗೆ?
ಶಿವಮೊಗ್ಗದಿಂದ ಸಾಗರದ ತಾಳಗುಪ್ಪ ಕಡೆಗೆ ಇಂಟರ್ಸಿಟಿ ರೈಲು ಸಂಚರಿಸುತ್ತಿತ್ತು. ಹೊಸನಗರದ ಸೂಡೂರು ಸಮೀಪ ರೈಲ್ವೆಯ 99ನೇ ಕಿ.ಮೀ.ನಲ್ಲಿ ರೈಲಿನ ಎಂಜಿನ್ ಚಕ್ರಗಳು, ಹಳಿಯಿಂದ ಕೆಳಗಿಳಿದಿವೆ. ಡ್ರಿಲ್ ಮೆಲ್ಟ್ ಆಗಿ ತುಂಡಾಗಿರುವುದರಿಂದ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ನಿಧಾನವಾಗಿ ಚಲಿಸುತ್ತು ರೈಲು
ಸೂಡೂರು ರೈಲ್ವೆ ಗೇಟ್ ಮತ್ತು ಅರಸಾಳು ರೈಲ್ವೆ ನಿಲ್ದಾಣದ ನಡುವೆ ತಿರುವು ಇದೆ. ಹಾಗಾಗಿ ಇಲ್ಲಿ ಕೇವಲ 40 ರಿಂದ 50 ಕಿ.ಮೀ ವೇಗದಲ್ಲಿ ರೈಲು ಸಂಚರಿಸಬೇಕು. ಇದೇ ವೇಗದಲ್ಲಿದ್ದ ಇಂಟರ್ಸಿಟಿ ರೈಲು ಎಂಜಿನ್ ಹಳಿ ತಪ್ಪಿದೆ. ಲೋಕೋ ಪೈಲೆಟ್ (ರೈಲು ಚಾಲಕ) ಸಮಯ ಪ್ರಜ್ಞೆ ಮರೆದಿದ್ದರಿಂದ ದೊಡ್ಡ ಅಪಾಯ ತಪ್ಪಿದೆ.
ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ
ರೈಲಿನಲ್ಲಿದ್ದ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಸಂಬಂಧಿಕರು, ಸ್ಥಳೀಯರ ನೆರವಿನೊಂದಿಗೆ ಪ್ರಯಾಣಿಕರು ಸಾಗರ, ತಾಳಗುಪ್ಪದ ಕಡೆಗೆ ತೆರಳುತ್ತಿದ್ದಾರೆ.
ರೈಲಿನ ಕಥೆ ಮುಂದೇನು?
ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹಳಿಯಿಂದ ಕೆಳಗಿಳಿದಿರುವ ಇಂಟರ್ಸಿಟಿ ರೈಲನ್ನು ಕುಂಸಿ ನಿಲ್ದಾಣಕ್ಕೆ ತರಲು ಯೋಜಿಸಲಾಗುತ್ತಿದೆ. ಮತ್ತೊಂದು ಎಂಜಿನ್ ಬಳಸಿ ರೈಲನ್ನು ತರಲು ಚಿಂತಿಸಲಾಗುತ್ತಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
![]()