ಶಿವಮೊಗ್ಗ ಲೈವ್.ಕಾಂ | SHIMOGA | 17 ಫೆಬ್ರವರಿ 2020
ಶ್ರೀಗಂಧ ಮರ ಕಡಿತಲೆಗೆ ಸಂಬಂಧಿಸಿ ಹೊಸನಗರ ತಾಲೂಕಿನ ಇಬ್ಬರಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಸಾದಾ ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
2017ರ ಜೂ.19ರಂದು ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದ ಕೇಶವ ಮತ್ತು ಸೋನಲೆ ಗ್ರಾಮದ ವಿರೂಪಾಕ್ಷ ಎಂಬುವವರು ವಸುವೆ ಗ್ರಾಮದ ಸರ್ವೇ ನಂ. 66ರ ಸರ್ಕಾರಿ ಜಾಗದಲ್ಲಿದ್ದ ಶ್ರೀಗಂಧ ಮರವನ್ನು ಕಡಿತಲೆ ಮಾಡಿ ಸಾಗಣೆ ಮಾಡುತ್ತಿದ್ದಾಗ ಹೊಸನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.
5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಶೋಭಾ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೇಶವ ಮತ್ತು ವಿರೂಪಾಕ್ಷ ಅವರಿಗೆ ಶಿಕ್ಷೆ ಹಾಗೂ ದಂಡದ ಪ್ರಮಾಣವನ್ನು ಪ್ರಕಟಿಸಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಅಣ್ಣಪ್ಪ ನಾಯ್ಕ ವಾದ ಮಂಡಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200