ಶಿವಮೊಗ್ಗ : ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಭದ್ರಾ ಕಾಡಾ ವ್ಯಾಪ್ತಿಯ ವಾರಾಹಿ ಯೋಜನೆ (Project) ಅಣೆಕಟ್ಟು ಹಾಗೂ ಅಚ್ಚುಕಟ್ಟು ಭಾಗದ ಸ್ಥಳವನ್ನು ಪರಿವೀಕ್ಷಿಸಿ, ರೈತರೊಂದಿಗೆ ಯೋಜನೆಯ ಕಾರ್ಯರೂಪದ ಕುರಿತು ಚರ್ಚಿಸಿದರು.
ನಂತರ ಭದ್ರಾಕಾಡಾ ಸಿದ್ದಾಪುರ ಕಚೇರಿಯಲ್ಲಿ ಕಾಡಾ ಹಾಗೂ ನೀರಾವರಿ ನಿಗಮದ ಅಧಿಕಾರಿಗಳ ಸಭೆ ನಡೆಸಿದರು. ಹೆಚ್ಚು ನೀರು ನಾಲೆಗಳಲ್ಲಿ ವ್ಯರ್ಥವಾಗಲು ಅವಕಾಶ ನೀಡದೆ ರೈತರ ಬೆಳೆಗಳಿಗೆ ಯಾವುದೇ ಸಮಸ್ಯೆಗಳು ಉಂಟಾಗದಂತೆ ಸಕಾಲಕ್ಕೆ ನೀರು ಒದಗಿಸುವ ಪ್ರಯತ್ನ ಮಾಡುವ ಅನಿವಾರ್ಯತೆ ಇದೆ. ರೈತರಿಗೆ ತೊಂದರೆ ಆಗದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ರೈತರ ಅಹವಾಲು ಆಲಿಸಿ ಸೂಕ್ತ ಪರಿಹಾರಕ್ಕಾಗಿ, ಇಲಾಖೆ ಸಚಿವರು ಹಾಗೂ ಸರ್ಕಾರದ ಗಮನಕ್ಕೆ ತಂದು ಅಚ್ಚುಕಟ್ಟು ಭಾಗದ ರೈತರ ಹಿತ ಕಾಪಾಡುವ ಭರವಸೆ ನೀಡಿದರು.

ಭದ್ರಾ ಕಾಡಾ ಆಡಳಿತಾಧಿಕಾರಿ, ಭೂ ಅಭಿವೃದ್ಧಿ ತಾಂತ್ರಿಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಯೋಜನೆಗೆ ಸಂಬಂಧಿಸಿದ ಎಂಜಿನಿಯರ್ಗಳು ಉಪಸ್ಥಿತರಿದ್ದರು.
ಇದನ್ನೂ ಓದಿ » ಭದ್ರಾವತಿ ಅಧಿಕಾರಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200