ನಡು ದಾರಿಯಲ್ಲೆ ಡಿಸೇಲ್‌ ಖಾಲಿಯಾಗಿ ನಿಂತ KSRTC ಬಸ್‌, ಮಳೆಯಲ್ಲಿ ಪ್ರಯಾಣಿಕರ ಪರದಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 MAY 2024

HOSANAGARA : ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ KSRTC ಬಸ್‌ನಲ್ಲಿ ಡಿಸೇಲ್‌ ಖಾಲಿಯಾಗಿ ಮಾರ್ಗ ಮಧ್ಯದಲ್ಲೆ ನಿಂತಿದೆ. ಬುಧವಾರ ಸಂಜೆ ಘಟನೆಯಾಗಿದೆ. ಇದರಿಂದ ಪ್ರಯಾಣಿಕರು ತಮ್ಮೂರಿಗೆ ತೆರಳಲು ಪರದಾಡುವಂತಾಯಿತು. ಸಾರಿಗೆ ನಿಗಮದ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು.

ಹೊಸನಗರ ತಾಲೂಕು ಮಾಸ್ತಿಕಟ್ಟೆ ಬಳಿ ಬಸ್‌ನಲ್ಲಿ ಡಿಸೇಲ್‌ ಖಾಲಿಯಾಗಿದೆ. ಸಾರಿಗೆ ನಿಗಮ ಡಿಸೇಲ್‌ಗೆ ವ್ಯವಸ್ಥೆ ಮಾಡದಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಮಹಿಳೆಯರು, ಮಕ್ಕಳು, ವೃದ್ಧರು ಮಳೆಯಲ್ಲಿ ನಿಂತು ಖಾಸಗಿ ಬಸ್‌ ಮತ್ತು ಪರ್ಯಾಯ ವ್ಯವಸ್ಥೆಯಲ್ಲಿ ತಮ್ಮೂರಿಗೆ ತೆಲುಪುವಂತಾಯಿತು.

ಇದನ್ನೂ ಓದಿ – ಶಿವಮೊಗ್ಗ – ಆಗುಂಬೆ ಮಾರ್ಗದ ಬಸ್ಸಿನ ಕಂಡಕ್ಟರ್‌ಗೆ ಜೀವ ಬೆದರಿಕೆ

ಈಚೆಗೆ ಮೂರ್ನಾಲ್ಕು ಬಾರಿ ಡಿಸೇಲ್‌ ಖಾಲಿಯಾಗಿ ಬಸ್‌ ಮಾರ್ಗ ಮಧ್ಯೆ ನಿಂತಿದೆ. ಸಾರಿಗೆ ನಿಗಮದ ಅಧಿಕಾರಿಗಳ ಉಡಾಫೆಯಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

KSRTC STOPPED IN MASTIKATTE

KSRTC STOPPED IN MASTIKATTE

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 23, 2024

Leave a Comment