SHIVAMOGGA LIVE NEWS | 23 MAY 2024
HOSANAGARA : ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ KSRTC ಬಸ್ನಲ್ಲಿ ಡಿಸೇಲ್ ಖಾಲಿಯಾಗಿ ಮಾರ್ಗ ಮಧ್ಯದಲ್ಲೆ ನಿಂತಿದೆ. ಬುಧವಾರ ಸಂಜೆ ಘಟನೆಯಾಗಿದೆ. ಇದರಿಂದ ಪ್ರಯಾಣಿಕರು ತಮ್ಮೂರಿಗೆ ತೆರಳಲು ಪರದಾಡುವಂತಾಯಿತು. ಸಾರಿಗೆ ನಿಗಮದ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು.
ಹೊಸನಗರ ತಾಲೂಕು ಮಾಸ್ತಿಕಟ್ಟೆ ಬಳಿ ಬಸ್ನಲ್ಲಿ ಡಿಸೇಲ್ ಖಾಲಿಯಾಗಿದೆ. ಸಾರಿಗೆ ನಿಗಮ ಡಿಸೇಲ್ಗೆ ವ್ಯವಸ್ಥೆ ಮಾಡದಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಮಹಿಳೆಯರು, ಮಕ್ಕಳು, ವೃದ್ಧರು ಮಳೆಯಲ್ಲಿ ನಿಂತು ಖಾಸಗಿ ಬಸ್ ಮತ್ತು ಪರ್ಯಾಯ ವ್ಯವಸ್ಥೆಯಲ್ಲಿ ತಮ್ಮೂರಿಗೆ ತೆಲುಪುವಂತಾಯಿತು.
ಇದನ್ನೂ ಓದಿ – ಶಿವಮೊಗ್ಗ – ಆಗುಂಬೆ ಮಾರ್ಗದ ಬಸ್ಸಿನ ಕಂಡಕ್ಟರ್ಗೆ ಜೀವ ಬೆದರಿಕೆ
ಈಚೆಗೆ ಮೂರ್ನಾಲ್ಕು ಬಾರಿ ಡಿಸೇಲ್ ಖಾಲಿಯಾಗಿ ಬಸ್ ಮಾರ್ಗ ಮಧ್ಯೆ ನಿಂತಿದೆ. ಸಾರಿಗೆ ನಿಗಮದ ಅಧಿಕಾರಿಗಳ ಉಡಾಫೆಯಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200