ಕೆಂಚನಾಲ ಮಾರಿಕಾಂಬಾ ದೇವಸ್ಥಾನದಲ್ಲಿ ಮಳೆಗಾಲದ ಜಾತ್ರೆ, ಯಾವಾಗ? ಏನೇನು ಕಾರ್ಯಕ್ರಮವಿದೆ?

ರಿಪ್ಪನ್‌ಪೇಟೆ: ಸಮೀಪದ ಕೆಂಚನಾಲ ಗ್ರಾಮದ ಇತಿಹಾಸ ಪ್ರಸಿದ್ಧ ಮಾರಿಕಾಂಬಾ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ಆಗಸ್ಟ್ 11ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ವರ್ಷದಲ್ಲಿ ಎರಡು ಬಾರಿ ಜಾತ್ರೆ ನಡೆಯುವುದು ಇಲ್ಲಿನ ವಿಶೇಷ. ಮಳೆಗಾಲದಲ್ಲಿ ಮಂಗಳವಾರ ಹಾಗೂ ಬೇಸಿಗೆಯಲ್ಲಿ ಬುಧವಾರ ನಡೆಯುವ ಈ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಭಕ್ತರು ಬಂದು ಹರಕೆ, ಪೂಜೆ ಸಲ್ಲಿಸುವುದು ವಾಡಿಕೆ. ಆಗಸ್ಟ್ 11ರ ಬೆಳಿಗ್ಗೆ 6ಕ್ಕೆ ದೇವಿ ಸನ್ನಿಧಿಯಲ್ಲಿ ವಿಶೇಷ ಅಲಂಕಾರ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುವಂತೆ ಜಾತ್ರಾ ಮಹೋತ್ಸವ ಸಮಿತಿ ಹಾಗೂ ದೇವಸ್ಥಾನ ಸೇವಾ ಸಮಿತಿ ಮನವಿ ಮಾಡಿದೆ.

Kenchanala-Marikamba-temple.webp