ನಾಡ ಕಚೇರಿಗೆ ಎಂಎಲ್‌ಎ ದಿಢೀರ್‌ ಭೇಟಿ, ಉಪ ತಹಶೀಲ್ದಾರ್‌ಗೆ ಖಡಕ್‌ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 31 MAY 2023

RIPPONPETE : ಇಲ್ಲಿನ ನಾಡ ಕಚೇರಿಗೆ (Nada Kacheri) ಶಾಸಕ ಬೇಳೂರು ಗೋಪಾಲಕೃಷ್ಣ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳ ಕಾರ್ಯ ಚಟುವಟಿಕೆ ಗಮನಿಸಿದರು. ಸಾರ್ವಜನಿಕರ ಅಹವಾಲು ಆಲಿಸಿದರು.

MLA-Beluru-Gopalakrishna-Sudden-Visit-to-Ripponpete-Nadakacheri.

ಈ ವೇಳೆ ಉಪ ತಹಶೀಲ್ದಾರ್‌ ಹುಚ್ಚರಾಯಪ್ಪ ಅವರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಕೆಲವು ಸೂಚನೆ ನೀಡಿದರು.

QUOTE LOGO NEW jpg

ಸಮಸ್ಯೆಗಳ ಪರಿಹಾರಕ್ಕೆ ಜನರು ನಾಡ ಕಚೇರಿಗೆ ಬರುತ್ತಾರೆ. ವಿನಾಕಾರಣ ಅವರನ್ನು ಅಲೆದಾಡಿಸಬೇಡಿ. ಇಂತಹ ವರ್ತನೆಯನ್ನು ಸಹಿಸುವುದಿಲ್ಲ. ಕಚೇರಿಗೆ ಬರುವ ಪ್ರತಿಯೊಬ್ಬರ ಸಮಸ್ಯೆಯನ್ನು ಆಲಿಸಿ. ಅವರಿಗೆ ಅರ್ಥವಾಗುವಂತೆ ತಿಳಿ ಹೇಳಬೇಕು. ಅವರ ಸಮಸ್ಯೆಯನ್ನು ಬಗೆಹರಿಸಬೇಕು.ಬೇಳೂರು ಗೋಪಾಲಕೃಷ್ಣ, ಶಾಸಕ

ನಾಡ ಕಚೇರಿಗೆ (Nada Kacheri) ಸೂಕ್ತ ಕಟ್ಟಡವಿಲ್ಲ. ಮುಂದೆ ಸೂಕ್ತ ಸ್ಥಳ ಗುರುತಿಸಿ ನೂತನ ಕಟ್ಟಡ ನಿರ್ಮಿಸಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು. ಇನ್ನು, ಕೆಲವು ಅಧಿಕಾರಿಗಳ ಕುರಿತು ಸಾರ್ವಜನಿಕರಿಂದ ದೂರುಗಳಿವೆ. ಅವುಗಳ ಕುರಿತು ಗಮನ ಹರಿಸುವಂತೆ ಉಪ ತಹಶೀಲ್ದಾರ್‌ಗೆ ಸೂಚನೆ ನೀಡಿದರು.

ಇದನ್ನೂ ಓದಿ – ಜನ ಶತಾಬ್ದಿ ರೈಲು 3 ಗಂಟೆ ಲೇಟ್‌, ರಾತ್ರಿ ಬದಲು ಮಧ್ಯರಾತ್ರಿ ಶಿವಮೊಗ್ಗ ತಲುಪಿದ ಟ್ರೈನ್‌, ಪ್ರಯಾಣಿಕರು ಹೈರಾಣು

ಗ್ರಾಮ ಪಂಚಾಯಿತ ಸದಸ್ಯ ಗವಟೂರು ಗಣಪತಿ, ಆಸೀಫ್‌, ಮಧುಸೂದನ್‌, ಉಮಾಕರ, ಉಮೇಶ್‌ ಗೌಡ, ‍ಶ್ರೀಧರ, ನಾಗರಾಜ್‌, ವಿನಾಯಕ ಶೆಟ್ಟಿ, ರಾಜುಗೌಡ ಪಾಟೀಲ್‌ ಸೇರಿದಂತೆ ಹಲವರು ಇದ್ದರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment