SHIVAMOGGA LIVE | 31 MAY 2023
RIPPONPETE : ಇಲ್ಲಿನ ನಾಡ ಕಚೇರಿಗೆ (Nada Kacheri) ಶಾಸಕ ಬೇಳೂರು ಗೋಪಾಲಕೃಷ್ಣ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳ ಕಾರ್ಯ ಚಟುವಟಿಕೆ ಗಮನಿಸಿದರು. ಸಾರ್ವಜನಿಕರ ಅಹವಾಲು ಆಲಿಸಿದರು.
ಈ ವೇಳೆ ಉಪ ತಹಶೀಲ್ದಾರ್ ಹುಚ್ಚರಾಯಪ್ಪ ಅವರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಕೆಲವು ಸೂಚನೆ ನೀಡಿದರು.
ನಾಡ ಕಚೇರಿಗೆ (Nada Kacheri) ಸೂಕ್ತ ಕಟ್ಟಡವಿಲ್ಲ. ಮುಂದೆ ಸೂಕ್ತ ಸ್ಥಳ ಗುರುತಿಸಿ ನೂತನ ಕಟ್ಟಡ ನಿರ್ಮಿಸಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು. ಇನ್ನು, ಕೆಲವು ಅಧಿಕಾರಿಗಳ ಕುರಿತು ಸಾರ್ವಜನಿಕರಿಂದ ದೂರುಗಳಿವೆ. ಅವುಗಳ ಕುರಿತು ಗಮನ ಹರಿಸುವಂತೆ ಉಪ ತಹಶೀಲ್ದಾರ್ಗೆ ಸೂಚನೆ ನೀಡಿದರು.
ಇದನ್ನೂ ಓದಿ – ಜನ ಶತಾಬ್ದಿ ರೈಲು 3 ಗಂಟೆ ಲೇಟ್, ರಾತ್ರಿ ಬದಲು ಮಧ್ಯರಾತ್ರಿ ಶಿವಮೊಗ್ಗ ತಲುಪಿದ ಟ್ರೈನ್, ಪ್ರಯಾಣಿಕರು ಹೈರಾಣು
ಗ್ರಾಮ ಪಂಚಾಯಿತ ಸದಸ್ಯ ಗವಟೂರು ಗಣಪತಿ, ಆಸೀಫ್, ಮಧುಸೂದನ್, ಉಮಾಕರ, ಉಮೇಶ್ ಗೌಡ, ಶ್ರೀಧರ, ನಾಗರಾಜ್, ವಿನಾಯಕ ಶೆಟ್ಟಿ, ರಾಜುಗೌಡ ಪಾಟೀಲ್ ಸೇರಿದಂತೆ ಹಲವರು ಇದ್ದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200