SHIVAMOGGA LIVE NEWS | 25 AUGUST 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
HOSANAGARA : ನಾಡಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ (Araga Jnanendra), ಕರ್ತವ್ಯಕ್ಕೆ ತಡವಾಗಿ ಹಾಜರಾದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಪ ತಹಶೀಲ್ದಾರ್ ಇಲ್ಲದಿರುವುದು ಕಂಡು ಗರಂ ಆದರು.
ಹೊಸನಗರದ ನಗರ ನಾಡ ಕಚೇರಿಗೆ ಶಾಸಕ ಆರಗ ಜ್ಞಾನೇಂದ್ರ ಹಠಾತ್ ಭೇಟಿ ನೀಡಿದರು. ಹಾಜರಾತಿ ಪುಸ್ತಕ ತರಿಸಿಕೊಂಡು ಪರಿಶೀಲನೆ ನಡೆಸಿದರು.

ಉಪ ತಹಶೀಲ್ದಾರ್ ಇರಲಿಲ್ಲ
ಶಾಸಕ ಆರಗ ಜ್ಞಾನೇಂದ್ರ ಭೇಟಿ ವೇಳೆ ಉಪ ತಹಶೀಲ್ದಾರ್ ಅವರು ನಾಡ ಕಚೇರಿಯಲ್ಲಿ ಇರಲಿಲ್ಲ. ತಕ್ಷಣ ತಾಲೂಕು ಕಚೇರಿಗೆ ಕರೆ ಮಾಡಿ ಉಪ ತಹಶೀಲ್ದಾರ್ ಕುರಿತು ಮಾಹಿತಿ ಕೇಳಿದರು. ಅವರು ಅಲ್ಲಿಯು ಇರಲಿಲ್ಲ. ಬಹು ಹೊತ್ತಿನ ಬಳಿಕ ಉಪ ತಹಶೀಲ್ದಾರ್ ಅವರು ಕಚೇರಿ ಆಗಮಿಸಿದರು. ಇದನ್ನು ಕಂಡು ಶಾಸಕ ಆರಗ ಜ್ಞಾನೇಂದ್ರ ಗರಂ ಆದರು. ನಿಗದಿತ ಸಮಯಕ್ಕೆ ಕಚೇರಿಗೆ ಅಗಮಿಸಬೇಕು ಎಂದು ತಾಕೀತು ಮಾಡಿದರು.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ನೊಟೀಸ್, ಯೋಜನೆ ಜಾರಿಗೆ ದಿನಾಂಕ ಫಿಕ್ಸ್
ಇವತ್ತಿಗೆ ಇವೆಲ್ಲ ಕೊನೆಯಾಗಬೇಕು
ಜನರು ಅಧಿಕಾರಿಗಳಿಗಾಗಿ ಕಾಯಬಾರದು. ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿ ಜನರ ಕೆಲಸ ಮಾಡಬೇಕು. ಇನ್ನು, ಜನರ ಕೆಲಸಕ್ಕೆ ಹಣ ಪಡೆಯುತ್ತಿರುವ ಕುರಿತು ದೂರುಗಳು ಬರುತ್ತಿವೆ. ಇವೆಲ್ಲವು ಇವತ್ತಿಗೆ ಕೊನೆಯಾಗಬೇಕು ಎಂದು ಸೂಚನೆ ನೀಡಿದರು.
ನಗರ ಆಸ್ಪತ್ರೆಗು ಭೇಟಿ
ಇದೆ ವೇಳೆ ನಗರ ಆಸ್ಪತ್ರೆಗು ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆ ಸಿಬ್ಬಂದಿ, ರೋಗಿಗಳ ಜೊತೆಗೆ ಕೆಲವು ಹೊತ್ತು ಚರ್ಚೆ ನಡಸಿ ಅಭಿಪ್ರಾಯ ಸಂಗ್ರಹಿಸಿದರು.
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






