ಜೇನುಕಲ್ಲಮ್ಮ ದೇಗುಲಕ್ಕೆ ನೂತನ ಅಧ್ಯಕ್ಷರ ಆಯ್ಕೆ, ಹೊಸ ಯೋಜನೆಗಳ ಕುರಿತು ಚರ್ಚೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ಪುರಾಣ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ (president) ಕಲಗೋಡು ರತ್ನಾಕರ್‌ ಆಯ್ಕೆಯಾಗಿದ್ದಾರೆ. ಈಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.

Kalgodu-Rathnakar-new-president-of-Jenukallama-temple

ದೇವಸ್ಥಾನದ ವ್ಯವಸ್ಥಾಪನೆಗೆ ಮುಜರಾಯಿ ಇಲಾಖೆಯಿಂದ 9 ಸದಸ್ಯರ ಸಮಿತಿ ರಚಿಸಲಾಗಿದೆ. ಅಧ್ಯಕ್ಷ ಕಲಗೋಡು ರತ್ನಾಕರ್‌ ನೇತೃತ್ವದಲ್ಲಿ ವ್ಯವಸ್ಥಾಪನಾ ಸಮಿತಿಯು, ಶಾಸಕ ಬೇಳೂರು ಗೋಪಾಲಕೃಷ್ಣ ಅವರನ್ನು ಭೇಟಿಯಾಗಿ ಗೌರವಸಿತು.

ರಾಜ್ಯ ಸರ್ಕಾರ ಪ್ರವಾಸೋದ್ಯಮ ಇಲಾಖೆಯ ಪಟ್ಟಿಯಲ್ಲಿ ಅಮ್ಮನಘಟ್ಟ ಜೇನುಕಲ್ಲಮ್ಮ ಕ್ಷೇತ್ರವು ಸ್ಥಾನ ಪಡೆದಿದೆ. ಈ ಬೆಳವಣಿಗೆ ದೇವಿಯ ಭಕ್ತರಿಗೆ ಸಂತಸ ತಂದಿದೆ. ದೇವಸ್ಥಾನದ ಸರ್ವತೋಮುಖ ಅಭಿವೃದ್ಧಿಗೆ ಸಮಿತಿಯು ಕಾರ್ಯೋನ್ಮುಖವಾಗಲಿದೆ. ಭಕ್ತರಿಗೆ ಮೂಲ ಸೌಕರ್ಯ ಒದಗಿಸುವುದು, ದೇಗುಲದ ಪರಂಪರೆ ಉಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.ಕಲಗೋಡು ರತ್ನಾಕರ್‌, ಜೇನುಕಲ್ಲಮ್ಮ ದೇಗುಲದ ಅಧ್ಯಕ್ಷ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment