ಹೊಸನಗರ ಕ್ಷೇತ್ರ, ಶೀಘ್ರದಲ್ಲೇ ಪಾದಯಾತ್ರೆ ಆಯೋಜನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಶೀಘ್ರದಲ್ಲೇ ಪಾದಯಾತ್ರೆ (Padayatra) ಆಯೋಜಿಸಲಾಗುವುದು ಎಂದು ಮಾಜಿ ಶಾಸಕ ಬಿ.ಸ್ವಾಮಿರಾವ್ ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗದ ರೈಸ್‌ ಮಿಲ್‌ ಮಾಲೀಕನಿಗೆ ಹಾಸನದ ವ್ಯಕ್ತಿಯಿಂದ ಲಕ್ಷ ಲಕ್ಷ ವಂಚನೆ, ಆಗಿದ್ದೇನು?

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿ.ಸ್ವಾಮಿರಾವ್‌, ಹೊಸನಗರ ವಿಧಾನಸಭಾ ಕ್ಷೇತ್ರ ರಚನೆಗೆ ಹಕ್ಕೊತ್ತಾಯ ಮಂಡಿಸಲು ತಾಲೂಕಿನ ಎಲ್ಲ ರಾಜಕೀಯ ಪಕ್ಷಗಳು, ಸಂಘಟನೆಗಳು, ಸಂಘ ಸಂಸ್ಥೆಗಳ ಜತೆ ಒಟ್ಟಾಗಿ ಸಮಗ್ರ ಹೋರಾಟ ರೂಪಿಸಲಾಗುವುದು ಎಂದರು.

ಕ್ಷೇತ್ರ ಪುನ‌ರ್ ವಿಂಗಡಣೆ ಹೊತ್ತಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಪಕ್ಕದ ತೀರ್ಥಹಳ್ಳಿ ಹಾಗೂ ಸಾಗರ ಕ್ಷೇತ್ರಗಳ ಜೊತೆ ಹಂಚಲಾಯಿತು. ಇದರಿಂದ ಮೂಲ ಸೌಕರ್ಯಗಳು ದೊರೆಯದೆ ಹಿಂದುಳಿದ ತಾಲೂಕಾಗಿದೆ. ವಿಧಾನಸಭಾ ಕ್ಷೇತ್ರ ಪುನಃ ಗಳಿಸಿಕೊಳ್ಳಲು ತಾಲೂಕಿನ ಜನತೆ ಈಗಿಂದಲೇ ಒಂದಾಗಬೇಕು. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಕ್ಷೇತ್ರದ ಅವಶ್ಯಕತೆ ತುಂಬಾ ಇದೆ ಎಂದರು.

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment