ಹೊಸನಗರ: ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಶೀಘ್ರದಲ್ಲೇ ಪಾದಯಾತ್ರೆ (Padayatra) ಆಯೋಜಿಸಲಾಗುವುದು ಎಂದು ಮಾಜಿ ಶಾಸಕ ಬಿ.ಸ್ವಾಮಿರಾವ್ ತಿಳಿಸಿದರು.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ » ಶಿವಮೊಗ್ಗದ ರೈಸ್ ಮಿಲ್ ಮಾಲೀಕನಿಗೆ ಹಾಸನದ ವ್ಯಕ್ತಿಯಿಂದ ಲಕ್ಷ ಲಕ್ಷ ವಂಚನೆ, ಆಗಿದ್ದೇನು?
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿ.ಸ್ವಾಮಿರಾವ್, ಹೊಸನಗರ ವಿಧಾನಸಭಾ ಕ್ಷೇತ್ರ ರಚನೆಗೆ ಹಕ್ಕೊತ್ತಾಯ ಮಂಡಿಸಲು ತಾಲೂಕಿನ ಎಲ್ಲ ರಾಜಕೀಯ ಪಕ್ಷಗಳು, ಸಂಘಟನೆಗಳು, ಸಂಘ ಸಂಸ್ಥೆಗಳ ಜತೆ ಒಟ್ಟಾಗಿ ಸಮಗ್ರ ಹೋರಾಟ ರೂಪಿಸಲಾಗುವುದು ಎಂದರು.
ಕ್ಷೇತ್ರ ಪುನರ್ ವಿಂಗಡಣೆ ಹೊತ್ತಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಪಕ್ಕದ ತೀರ್ಥಹಳ್ಳಿ ಹಾಗೂ ಸಾಗರ ಕ್ಷೇತ್ರಗಳ ಜೊತೆ ಹಂಚಲಾಯಿತು. ಇದರಿಂದ ಮೂಲ ಸೌಕರ್ಯಗಳು ದೊರೆಯದೆ ಹಿಂದುಳಿದ ತಾಲೂಕಾಗಿದೆ. ವಿಧಾನಸಭಾ ಕ್ಷೇತ್ರ ಪುನಃ ಗಳಿಸಿಕೊಳ್ಳಲು ತಾಲೂಕಿನ ಜನತೆ ಈಗಿಂದಲೇ ಒಂದಾಗಬೇಕು. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಕ್ಷೇತ್ರದ ಅವಶ್ಯಕತೆ ತುಂಬಾ ಇದೆ ಎಂದರು.