SHIVAMOGGA LIVE NEWS | 13 DECEMBER 2022
ರಿಪ್ಪನ್ ಪೇಟೆ : ಪತ್ನಿಯನ್ನು ರಕ್ಷಿಸುವ ಪ್ರಯತ್ನದಲ್ಲಿ ಪತಿ ವಿದ್ಯುತ್ ಶಾಕ್ಗೆ (current shock) ಬಲಿಯಾದ ಘಟನೆ ಸಮೀಪದ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ರೈತ ಶೇಷಗಿರಿ (47) ಮೃತರು. ಸೋಮವಾರ ಬೆಳಗ್ಗೆ ಶೇಷಗಿರಿ ಅವರ ಪತ್ನಿ ಹೂವು ಕೀಳಲು ಹೋದಾಗ ವಿದ್ಯುತ್ ಸ್ಪರ್ಶಿಸಿ (current shock) ಕೂಗಿಕೊಂಡಿದ್ದು ತಕ್ಷಣ ಪತಿ ಶೇಷಗಿರಿ ಸ್ಥಳಕ್ಕೆ ತೆರಳಿ ಪತ್ನಿಯನ್ನು ಎಳೆದು ತಂತಿಯ ಮೇಲೆ ಕಾಲಿಟ್ಟಾಗ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾತ್ರಿ ವಿದ್ಯುತ್ ತಂತಿ ತುಂಡಾಗಿ ಮನೆಯ ಹಿಂಭಾಗದ ಐಬೆಕ್ಸ್ ಬೇಲಿಯ ಮೇಲೆ ಬಿದ್ದು ತಂತಿಯಿಂದ ವಿದ್ಯುತ್ ಪ್ರವಹಿಸಿ ಈ ದುರಂತ ಸಂಭವಿಸಿದೆ.
ಇದನ್ನೂ ಓದಿ – ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವರ ಆಭರಣಗಳು ಕಳವು
ರಿಪ್ಪನ್ ಪೇಟೆ ಠಾಣೆಯಲ್ಲಿ ಮೆಸ್ಕಾಂ ಇಲಾಖೆ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತರಿಗೆ ಇಬ್ಬರು ಪುತ್ರಿಯರಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200