ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 4 ಮಾರ್ಚ್ 2020
ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜೋಶೋಧಾಬೆನ್ ಅವರು ಇವತ್ತು ಹೊಸನಗರದ ಶ್ರೀ ರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿದ್ದರು. ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ರಾಮಚಂದ್ರಾಪುರ ಮಠದಲ್ಲಿ ನಡೆಯುತ್ತಿರುವ ಕೃಷ್ಣಾರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಜೋಶೋಧಾಬೆನ್ ಮೋದಿ ಅವರು ಮಠಕ್ಕೆ ಆಗಮಿಸಿದ್ದರು.
ಗೋವರ್ಧನಗಿರಿಯಲ್ಲಿ ಪೂಜೆ
ಶ್ರೀರಾಮಚಂದ್ರಾಪುರಕ್ಕೆ ಆಗಮಿಸುತ್ತಿದ್ದಂತೆ ಗೋವರ್ಧನ ಗಿರಿಗೆ ತೆರಳಿದ ಜೋಶೋಧಾಬೆನ್ ಮೋದಿ ಅವರು, ವಿಶೇಷ ಪೊಜೆ ಸಲ್ಲಿಸಿದರು. ಆ ಬಳಿಕ ಕಾರ್ಯಕ್ರಮದ ವೇದಿಕೆಗೆ ಆಗಮಿಸಿ, ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ರಾಘವೇಶ್ವರರಲ್ಲಿ ಆದಿ ಶಂಕರಾಚಾರ್ಯರನ್ನು ಕಂಡೆ
ಕಾರ್ಯಕ್ರಮದಲ್ಲಿ ಮಾತನಾಡಿದ ಜೋಶೋಧಾಬೆನ್ ಮೋದಿ ಅವರು, ಶ್ರೀರಾಘವೇಶ್ವರ ಸ್ವಾಮೀಜಿಯವರಲ್ಲಿ ನಾನು ಆದಿ ಶಂಕರಾಚಾರ್ಯರನ್ನು ಕಂಡೆ ಎಂದರು. ಶಂಕರಾಚಾರ್ಯರ ಕಾಲಿಗೆ ಮೊಸಳೆ ಕಚ್ಚಿದ ಕಥೆ ನೆನಪಿಸಿಕೊಂಡ ಅವರು, ಸಾಧುಸಂತರ ಬಗ್ಗೆ ಅಪಾರ ಗೌರವವಿರುವುದರಿಂದ ದೇಶದ ಉದ್ದಲಕ್ಕೆ ತೆರಳಿ ಸಾಧುಸಂತರ ಭೇಟಿ ಮಾಡುತ್ತಿದ್ದೇನೆ. ಭೇಟಿ ಪಡಾವೋ ಭೇಟಿ ಬಚಾವೋ ಕುರಿತು ಎಲ್ಲವರೂ ಹೆಚ್ಚು ಆಸಕ್ತಿ ವಹಿಸಬೇಕು ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






