ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಿಪ್ಪನ್ಪೇಟೆ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ಪೊಲೀಸರು ದಿಢೀರ್ ದಾಳಿ (Raid) ನಡೆಸಿ ಮದ್ಯ ಮತ್ತು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ರಿಪ್ಪನ್ಪೇಟೆ, ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪಿಎಸ್ಐ ಪ್ರವೀಣ್ ಎಸ್.ಪಿ ನೇತೃತ್ವದ ತಂಡ ದಾಳಿ ನಡೆಸಿದೆ. ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವುಣೆ ಗ್ರಾಮದ ಕಿರಾಣಿ ಅಂಗಡಿ, ಪಟ್ಟಣದ ಸಾಗರ ರಸ್ತೆಯ ಪುನೀತ್ ರಾಜಕುಮಾರ್ ವೃತ್ತದ ಬಳಿ ಹೋಟೆಲ್ ಮತ್ತು ಕೆಂಚನಾಲ ಗ್ರಾಮದ ಕಿರಾಣಿ ಅಂಗಡಿ, ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಪುರ – ಕೋಟೆಕೆರೆ ಗ್ರಾಮದ ಕಿರಾಣಿ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಮತ್ತು ಮಾರಾಟಗಾರರನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ ಪೊಲೀಸ್ ಸಿಬ್ಬಂದಿ ಉಮೇಶ್, ಸಂತೋಷ್ ಕೊರವರ, ರಾಮಚಂದ್ರ ಮತ್ತು ನಾಗೇಶ್ ಪಾಲ್ಗೊಂಡಿದ್ದರು.
ಇದನ್ನೂ ಓದಿ » ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?


LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





