ರಿಪ್ಪನ್ಪೇಟೆ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ಪೊಲೀಸರು ದಿಢೀರ್ ದಾಳಿ (Raid) ನಡೆಸಿ ಮದ್ಯ ಮತ್ತು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ರಿಪ್ಪನ್ಪೇಟೆ, ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪಿಎಸ್ಐ ಪ್ರವೀಣ್ ಎಸ್.ಪಿ ನೇತೃತ್ವದ ತಂಡ ದಾಳಿ ನಡೆಸಿದೆ. ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವುಣೆ ಗ್ರಾಮದ ಕಿರಾಣಿ ಅಂಗಡಿ, ಪಟ್ಟಣದ ಸಾಗರ ರಸ್ತೆಯ ಪುನೀತ್ ರಾಜಕುಮಾರ್ ವೃತ್ತದ ಬಳಿ ಹೋಟೆಲ್ ಮತ್ತು ಕೆಂಚನಾಲ ಗ್ರಾಮದ ಕಿರಾಣಿ ಅಂಗಡಿ, ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಪುರ – ಕೋಟೆಕೆರೆ ಗ್ರಾಮದ ಕಿರಾಣಿ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಮತ್ತು ಮಾರಾಟಗಾರರನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ ಪೊಲೀಸ್ ಸಿಬ್ಬಂದಿ ಉಮೇಶ್, ಸಂತೋಷ್ ಕೊರವರ, ರಾಮಚಂದ್ರ ಮತ್ತು ನಾಗೇಶ್ ಪಾಲ್ಗೊಂಡಿದ್ದರು.
ಇದನ್ನೂ ಓದಿ » ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200