ಫಲಾನುಭವಿಗಳ ಆಯ್ಕೆ ಗ್ರಾಮ ಸಭೆಯಲ್ಲಲ್ಲ, ಶಾಸಕರ ಕೈಯಲ್ಲಿ, ಹೊಸನಗರದಲ್ಲಿ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021

ವಸತಿ ಫಲಾನುಭವಿಗಳ ಆಯ್ಕೆಯ ಜವಾಬ್ದಾರಿಯನ್ನು ಶಾಸಕರಿಗೆ ನೀಡಿರು ಕ್ರಮಕ್ಕೆ ಹೊಸನಗರ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಹೊಸನಗರ ತಾಲೂಕು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ತಾಲೂಕು ಕಾಂಗ್ರೆಸ್ ಘಟಕ, ಗ್ರಾಮ ಸಭೆಗಳಲ್ಲಿ ವಸತಿ ಫಲಾನುಭವಿಗಳ ಆಯ್ಕೆ ನಡೆಯುತ್ತಿತ್ತು. ಈಗ ಆ ಹೊಣೆಯನ್ನು ಶಾಸಕರಿಗೆ ವಹಿಸಲಾಗಿದೆ. ಇದರಿಂದ ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.

ವಿಕೇಂದ್ರಿಕರಣ ನೀತಿಗೆ ವಿರುದ್ಧ

ಈ ವೇಳೆ ಮಾತನಾಡಿದ ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಈವರೆಗೂ ದೇಶದಲ್ಲೇ ನಮ್ಮ ರಾಜ್ಯದ ಪಂಚಾಯತ್ ರಾಜ್ ವ್ಯವಸ್ಥೆ ಮಾದರಿಯನಿಸಿಕೊಂಡಿತ್ತು. ಆದರೆ ಶಾಸಕರು, ಸಚಿವರು ಮೂಗು ತೂರಿಸಲು ಆರಂಭಿ

ಫಲಾನುಭವಿಗಳ ಆಯ್ಕೆಯ ಜವಾಬ್ದಾರಿಯನ್ನು ಶಾಸಕರಿಗೆ ವಹಿಸಿರುವುದು ಪಂಚಾಯತ್ ರಾಜ್ ಕಾಯ್ದೆಯ ವಿರುದ್ಧವಾಗಲಿದೆ ಎಂದು ಆರೋಪಿಸಿದರು.

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ಸದಾಶಿವ ಶೆಟ್ಟಿ, ಸೂಚಕ ರಫೀಕ್, ತಾಲೂಕು ಪಂಚಾಯತ್ ಸದಸ್ಯರಾದ ಏರಿಗೆ ಉಮೇಶ್, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

164273257 1435466980146974 749103123887309271 o.jpg? nc cat=109&ccb=1 3& nc sid=730e14& nc ohc=Chh4Afyu1IMAX U J0u& nc ht=scontent.fblr20 1

165084350 1356439691384114 7616190328068291680 n.jpg? nc cat=100&ccb=1 3& nc sid=730e14& nc ohc=EOzmkVCpymUAX9FtL5h& nc ht=scontent.fblr20 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment