SHIVAMOGGA LIVE | 30 JULY 2023
NITTURU : ಪ್ರಸಿದ್ಧ ಪ್ರವಾಸಿ ತಾಣ ಮತ್ತು ಶ್ರದ್ಧಾ ಕೇಂದ್ರ ಕೊಡಚಾದ್ರಿಗೆ (Kodachadri) ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ವಾಹನದಲ್ಲಿ ತೆರಳುವುದು, ಚಾರಣ ಮಾಡುವುದನ್ನು ನಿಷೇಧಿಸಿ ವನ್ಯಜೀವಿ ವಿಭಾಗ ಆದೇಶ ಹೊರಡಿಸಿದೆ.
ಕೊಡಚಾದ್ರಿಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದರು. ವನ್ಯಜೀವಿ ವಿಭಾಗದ ಆದೇಶದಿಂದ ಪ್ರವಾಸಿಗರಿಗೆ ನಿರಾಸೆಯಾಗಿದೆ.
ನಿಷೇಧಕ್ಕೆ ಕಾರಣವೇನು?
ಭಾರಿ ಮಳೆಯಿಂದಾಗಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕಟ್ಟಿನಹೊಳೆ ಮೂಲಕ ಕೊಡಚಾದ್ರಿಗೆ ತೆರಳುವ ಜೀಪ್ ಮುಂತಾದ ವಾಹನಗಳು ಹಾಗೂ ವಿವಿಧ ಮಾರ್ಗದ ಮೂಲಕ ಚಾರಣಕ್ಕೆ ತೆರಳುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಿಂದ ವಿಮಾನ ಹಾರಾಟ 20 ದಿನ ತಡವಾಗಲು ಕಾರಣವೇನು? ಇಲ್ಲಿದೆ 3 ಕಾರಣ
ನಿಟ್ಟೂರು, ಸಂಪೆಕಟ್ಟೆ ಮತ್ತು ಕಟ್ಟಿನಹೊಳೆಯಿಂದ ಕೊಡಚಾದ್ರಿಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗಲು ಸುಮಾರು 150 ಜೀಪ್ಗಳಿವೆ. ವನ್ಯಜೀವಿ ವಿಭಾಗದ ಆದೇಶದಿಂದ ಈ ಜೀಪ್ಗಳು ತಮ್ಮೆ ಸೇವೆ ಸ್ಥಗಿತಗೊಳಿಸಿವೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200