ಸೂಡೂರು ಬಳಿ ಅಪಘಾತ, ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಸಾವು, ಹೇಗಾಯ್ತು ಘಟನೆ?

ರಿಪ್ಪನ್‌ಪೇಟೆ: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ (Road Accident) ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಯನೂರು ಸಮೀಪದ ಹೊಸೂರು ನಿವಾಸಿ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಜಿ.ಎಸ್ (65) ಮೃತರು.

ತೀರ್ಥಹಳ್ಳಿ ತಾಲೂಕಿನ ಅಂಬು ತೀರ್ಥ ಗ್ರಾಮದ ಸಂಬಂಧಿಕರ ಮನೆಯಲ್ಲಿ ವೈಕುಂಠ ಸಮಾರಾಧನೆ ಕಾರ್ಯಕ್ರಮ ಮುಗಿಸಿ ಊರಿಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಹೊಸನಗರ ತಾಲೂಕಿನ ಹಲವೆಡೆ ಜನವರಿ 11ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : January 11, 2026 at 8:24 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 11, 2026

Leave a Comment