ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOSANAGARA | 17 ಅಕ್ಟೋಬರ್ 2019

ಮಡೋಡಿ ಸೇತುವೆ ಕುಸಿದ ಬಳಿಕ ಬೈಂದೂರು, ರಾಣೆಬೆನ್ನೂರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ರಸ್ತೆ ಸಂಪರ್ಣ ಹಾಳಾಗಿದೆ. ಈ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟಕರವಾಗಿದೆ.
ಸೇತುವೆ ಕುಸಿದ ಹಿನ್ನೆಲೆ, ಮತ್ತಿಕೈ – ಮಡೋಡಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಭಾರಿ ಸಂಖ್ಯೆಯ ವಾಹನ ಸಂಚಾರದಿಂದಾಗಿ ಈ ರಸ್ತೆ ಗುಂಡಿಮಯವಾಗಿದೆ.
ಹಲವು ಮಜರೆ ಹಳ್ಳಿಗಳಿಗೆ ಈ ರಸ್ತೆ ಸಂಪರ್ಕ ಸೇತುವೆಯಾಗಿತ್ತು. ಆದರೆ ಈಗ ಗುಂಡಿಮಯವಾಗಿದೆ. ಇದರಿಂದ ಈ ಗ್ರಾಮಗಳ ಜನರು ಸಂಕಷ್ಟಕ್ಕೀಡಾಗಿದ್ದಾರೆ.
ಗುಂಡಿ ಬಿದ್ದ ರಸ್ತೆ ವೀಕ್ಷಣೆಗೆ ಕಿಮ್ಮನೆ

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಬುಧವಾರ ರಸ್ತೆಯ ಪರಿಸ್ಥಿತಿ ವೀಕ್ಷಿಸಿದರು. ತಾವು ಶಾಸಕರಾಗಿದ್ದ ಸಂದರ್ಭ 2012 – 13ರಲ್ಲಿ ಒಂದುವರೆ ಕೋಟಿ ರೂ. ವೆಚ್ಚದಲ್ಲಿ ರಸ್ತೆಯ ಅಭಿವೃದ್ಧಿ ಮಾಡಲಾಗಿತ್ತು. ಆದರೆ ಮಡೋಡಿ ಸೇತುವೆ ಕುಸಿತದಿಂದಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿ ರಸ್ತೆ ಹಾಳಾಗಿದೆ. ಸರ್ಕಾರ ಕೂಡಲೆ ರಸ್ತೆಯ ದುರಸ್ಥಿ ಕಾರ್ಯ ಮಾಡಬೇಕು ಎಂದು ಒತ್ತಾಯಿಸಿದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ವೇಳೆ ದೊಡ್ಮೆನ ಲಕ್ಷ್ಮೀನಾರಾಯಣ, ರಾಮಚಂದ್ರ, ಕರುಣಾಕರ ಶೆಟ್ಟಿ, ಮಹಾಬಲೇಶ್ವರ ಭಟ್, ಪುಟ್ಟಪ್ಪ, ಟಿ.ಡಿ.ಗಣಪತಿ, ವೆಂಕಟರಮಣ ಭಟ್ ಸೇರಿದಂತೆ ಹಲವರು ಇದ್ದರು.
ಲಿಂಕ್ ಕ್ಲಿಕ್ ಮಾಡಿ, ಕೆಳಗಿರುವ ಸುದ್ದಿಗಳನ್ನು ಓದಿ
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026
- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?
- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





