ಶಿವಮೊಗ್ಗ ಲೈವ್.ಕಾಂ | HOSANAGARA | 17 ಅಕ್ಟೋಬರ್ 2019

ಮಡೋಡಿ ಸೇತುವೆ ಕುಸಿದ ಬಳಿಕ ಬೈಂದೂರು, ರಾಣೆಬೆನ್ನೂರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ರಸ್ತೆ ಸಂಪರ್ಣ ಹಾಳಾಗಿದೆ. ಈ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟಕರವಾಗಿದೆ.
ಸೇತುವೆ ಕುಸಿದ ಹಿನ್ನೆಲೆ, ಮತ್ತಿಕೈ – ಮಡೋಡಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಭಾರಿ ಸಂಖ್ಯೆಯ ವಾಹನ ಸಂಚಾರದಿಂದಾಗಿ ಈ ರಸ್ತೆ ಗುಂಡಿಮಯವಾಗಿದೆ.
ಹಲವು ಮಜರೆ ಹಳ್ಳಿಗಳಿಗೆ ಈ ರಸ್ತೆ ಸಂಪರ್ಕ ಸೇತುವೆಯಾಗಿತ್ತು. ಆದರೆ ಈಗ ಗುಂಡಿಮಯವಾಗಿದೆ. ಇದರಿಂದ ಈ ಗ್ರಾಮಗಳ ಜನರು ಸಂಕಷ್ಟಕ್ಕೀಡಾಗಿದ್ದಾರೆ.
ಗುಂಡಿ ಬಿದ್ದ ರಸ್ತೆ ವೀಕ್ಷಣೆಗೆ ಕಿಮ್ಮನೆ

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಬುಧವಾರ ರಸ್ತೆಯ ಪರಿಸ್ಥಿತಿ ವೀಕ್ಷಿಸಿದರು. ತಾವು ಶಾಸಕರಾಗಿದ್ದ ಸಂದರ್ಭ 2012 – 13ರಲ್ಲಿ ಒಂದುವರೆ ಕೋಟಿ ರೂ. ವೆಚ್ಚದಲ್ಲಿ ರಸ್ತೆಯ ಅಭಿವೃದ್ಧಿ ಮಾಡಲಾಗಿತ್ತು. ಆದರೆ ಮಡೋಡಿ ಸೇತುವೆ ಕುಸಿತದಿಂದಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿ ರಸ್ತೆ ಹಾಳಾಗಿದೆ. ಸರ್ಕಾರ ಕೂಡಲೆ ರಸ್ತೆಯ ದುರಸ್ಥಿ ಕಾರ್ಯ ಮಾಡಬೇಕು ಎಂದು ಒತ್ತಾಯಿಸಿದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ವೇಳೆ ದೊಡ್ಮೆನ ಲಕ್ಷ್ಮೀನಾರಾಯಣ, ರಾಮಚಂದ್ರ, ಕರುಣಾಕರ ಶೆಟ್ಟಿ, ಮಹಾಬಲೇಶ್ವರ ಭಟ್, ಪುಟ್ಟಪ್ಪ, ಟಿ.ಡಿ.ಗಣಪತಿ, ವೆಂಕಟರಮಣ ಭಟ್ ಸೇರಿದಂತೆ ಹಲವರು ಇದ್ದರು.
ಲಿಂಕ್ ಕ್ಲಿಕ್ ಮಾಡಿ, ಕೆಳಗಿರುವ ಸುದ್ದಿಗಳನ್ನು ಓದಿ
- ಹಾರನಹಳ್ಳಿ ರಸ್ತೆಯಲ್ಲಿ ಅಪಘಾತ, ಸ್ಕೂಟಿ ಸವಾರು ಸಾವು, ಹೇಗಾಯ್ತು ಘಟನೆ?
- ಶಿವಮೊಗ್ಗದಲ್ಲಿ ಸಿಟಿಯಲ್ಲಿ ಅಧಿಕಾರಿಗಳ ದಾಳಿ, ಲೋಡ್ಗಟ್ಟಲೆ ಮರಳು ವಶಕ್ಕೆ
- ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಸುಸೂತ್ರ, ಮೊದಲ ದಿನ ಇನ್ನೂರಕ್ಕು ಹೆಚ್ಚು ಅಭ್ಯರ್ಥಿಗಳು ಗೈರು
- ಕಾಡು ಹಂದಿ ಬೇಟೆಯಾಡಿ ಮಾಂಸ ಹಂಚಿಕೊಳ್ಳುವಾಗ ಅರಣ್ಯಾಧಿಕಾರಿಗಳು ದಾಳಿ
- ಶಿವಮೊಗ್ಗ ಜಿಲ್ಲೆಯಲ್ಲಿ ಶಕೆ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200