HOSANAGARA NEWS, 21 SEPTEMBER 2024 : ಸದಾ ನೈತಿಕತೆ ಪಾಠ ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ರಾಜೀನಾಮೆ (Resign) ನೀಡಿ ನೈತಿಕತೆ ಪ್ರದರ್ಶಿಸಲಿ ಎಂದು ಶಾಸಕ ಆರಗ ಜ್ಞಾನೇಂದ್ರ ಸವಾಲು ಹಾಕಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ನ್ಯಾಯಾಲಯ ಆದೇಶಿಸಿದೆ. ಇನ್ನಾದರೂ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ. ಪ್ರಕರಣ ರಾಜ್ಯಪಾಲರ ಬಳಿ ಹೋಗಿ ವಿಚಾರಣೆ ಅನುಮತಿ ಕೊಡುವುದಕ್ಕಿಂತ ಮೊದಲೇ ರಾಜೀನಾಮೆ ನೀಡಿದಿದ್ದರೆ ಅವರ ಇಮೇಜ್ ಹೆಚ್ಚುತ್ತಿತ್ತು. ಆದರೆ ಈಗ ಅವರ ಇಮೇಜ್ ನೆಲಕಚ್ಚಿದೆ ಎಂದರು.
ಸುಸಂಸ್ಕೃತ, ಭವ್ಯ ಪರಂಪರೆ ಇರುವ ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಕೂರಬಾರದು. ಕಳಂಕ ಹೊತ್ತು ಅಧಿಕಾರ ನಡೆಸುವುದು ಸರಿಯಲ್ಲ. ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ. ವಿಚಾರಣೆ ನಡೆದು ಶುದ್ದರಾಮಯ್ಯ ಆಗಿ ಹೊರಬಂದು ಮತ್ತೆ ಬೇಕಾದರೆ ಸಿಎಂ ಸ್ಥಾನ ಅಲಂಕರಿಸಲಿ ಎಂದರು.
ಇದನ್ನೂ ಓದಿ » ತಿರುಪತಿ ಲಡ್ಡು ವಿವಾದ, ರಾಜ್ಯದಲ್ಲಿ ಎಲ್ಲ ತುಪ್ಪದ ತಪಾಸಣೆ ಆರಂಭ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200