ಹೊಸನಗರದ ಸೋನಲೆಯಲ್ಲಿ ಅಹೋರಾತ್ರಿ ಧರಣಿಯ ವಾರ್ನಿಂಗ್, ಆರೋಗ್ಯ ಕೇಂದ್ರದ ಮುಂದೆ ಪ್ರತಿಭಟನೆ ಶುರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | HOSANAGARA | 3 ಫೆಬ್ರವರಿ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರ್ತವ್ಯನಿರತ ವೈದ್ಯರನ್ನು ಬೇರೆಡೆಗೆ ನಿಯೋಜಿಸಿರುವುದರನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಹೋರಾತ್ರಿ ಧರಣಿ ನಡೆಸುವ ಎಚ್ಚರಿಕೆ ನೀಡಿದ್ದಾರೆ.

2019 readers copy new

ಹೊಸನಗರ ತಾಲೂಕು ಸೋನಲೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಮಾರುತಿ ಅವರನ್ನು ರಿಪ್ಪನ್’ಪೇಟೆ ಆರೋಗ್ಯ ಕೇಂದ್ರಕ್ಕೆ ವರ್ಗಾಯಿಸಲಾಗಿದೆ. ಇದರ ವಿರುದ್ಧ ಸೋನಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಗ್ರಾಮಸ್ಥರು ಪ್ರಾತಿಭಟನೆ ನಡೆಸುತ್ತಿದ್ದಾರೆ. ಸೋನಲೆ ಸುತ್ತಮುತ್ತಲು ಇವರೊಬ್ಬರೇ ವೈದ್ಯರಿದ್ದಾರೆ. ಇವರನ್ನು ಈಗ ರಿಪ್ಪನ್’ಪೇಟೆಗೆ ನಿಯೋಜಿಸಿದರೆ ಈ ಭಾಗದ ಗ್ರಾಮಸ್ಥರಿಗೆ ಸಮಸ್ಯೆ ಆಗಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಡಾ.ಮಾರುತಿ ಅವರನ್ನು ರಿಪ್ಪನ್’ಪೇಟೆಗೆ ನಿಯೋಜಿಸುವ ಸರ್ಕಾರದ ಆದೇಶವನ್ನು ಕೂಡಲೆ ಹಿಂಪಡೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದೇಶ ಹಿಂಪಡೆಯುವವರೆಗು ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಸ್ವಾಮಿರಾವ್, ತಾ.ಪಂ ಸದಸ್ಯ ಆಲವಳ್ಳಿ ವೀರೇಶ್, ವಾಲೆಮನೆ ನಾಗೇಶ್, ಗುರುಶೆಟ್ಟಿ ಬಿಳ್ಳೋಡಿ, ನಿವಣೆ ಮಹೇಶ್ ಗೌಡ, ಸೊನಲೆ ಸುರೇಶ್, ಸೊನಲೆ ರಾಜೇಶ್, ಸೊನಲೆ ವಿಜಯೇಂದ್ರಗೌಡ, ಹರೀಶ್, ವಿದ್ಯಾ, ಸುಮಾ, ರೂಪ, ಚೈತ್ರ, ಸುಮಿತ್ರ, ಅನುಪಮ, ನವ್ಯ, ವಿವಿಧ ಸಂಘಟನೆಗಳ ಪ್ರಮುಖರು ಇದ್ದರು.

84533154 796421937504385 9023917582444396544 n.jpg? nc cat=100& nc ohc=InBIs TWelAAX9Vh2Oz& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment