ರಿಪ್ಪನ್ ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ (village) ಯುವಕ ಸುನಿಲ್ (23) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಎಂದಿನಂತೆ ಕೆಲಸ ಮುಗಿಸಿಕೊಂಡು ಬುಧವಾರ ಮನೆಗೆ ಬಂದ ಯುವಕ, ರಾತ್ರಿ ಸಹೋದರರೊಂದಿಗೆ ಮಾತನಾಡಿ ಊಟ ಮುಗಿಸಿ ಮಲಗಲು ತೆರಳಿದ್ದಾನೆ. ತಡರಾತ್ರಿ ಗಮನಿಸಿದಾಗ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಮೃತರಿಗೆ ಅಪ್ಪ, ಅಮ್ಮ, ಅಣ್ಣ ಇದ್ದಾರೆ. ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ







