
ಶಿವಮೊಗ್ಗ ಲೈವ್.ಕಾಂ | HOSANAGARA NEWS | 26 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೈಕ್ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಹೊಸನಗರ ತಾಲೂಕು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಸುಮಾರು ಐದು ಲಕ್ಷ ಮೌಲ್ಯದ ಚಿನ್ನಾಭರಣವನ್ನು ದುಷ್ಕರ್ಮಿಗಳು ದೋಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹೇಗಾಯ್ತು ಘಟನೆ?
ಆರೋಡಿ ಕೊಡಸೆ ಸರ್ಕಾರಿ ಶಾಲೆ ಶಿಕ್ಷಕಿ ಮಂಜುಳಾ, ತಮ್ಮ ಬೈಕ್ನಲ್ಲಿ ತೆರಳುವಾಗ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಆರೋಡಿಯಿಂದ ಸಂಸೆ ಕಡೆಗೆ ತೆರಳುತ್ತಿದ್ದಾಗ ಬರೇಕಲ್ ಹೋಂಸ್ಟೇ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಹೆಲ್ಮೆಟ್, ಮಾಸ್ಕ್ ಧರಿಸಿದ್ದ ದುಷ್ಕರ್ಮಿಗಳು, ಶಿಕ್ಷಕಿಯನ್ನು ಅಡ್ಡಗಟ್ಟಿದ್ದಾರೆ. ಮಾರಕಾಸ್ತ್ರಗಳನ್ನು ತೋರಿಸಿ, ಬೆದರಿಸಿ ಚಿನ್ನಾಭರಣ ದೋಚಿದ್ದಾರೆ.
ಐದು ಲಕ್ಷ ಚಿನ್ನಾಭರಣ
ಶಿಕ್ಷಕಿ ಧರಿಸಿದ್ದ ಮಾಂಗಲ್ಯ ಸರ, ಬಳೆಗಳು, ಉಂಗುರಗಳು ಸೇರಿ ಸುಮಾರು 92 ಗ್ರಾಂನ ಚಿನ್ನಾಭರಣವನ್ನು ದುಷ್ಕರ್ಮಿಗಳು ದೋಚಿದ್ದಾರೆ. ಇದರ ಮೌಲ್ಯ ಸುಮಾರು ಐದು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಹೊಸನಗರ ಠಾಣೆ ಸಿಪಿಐ ಮಧುಸೂದನ್, ಪಿಎಸ್ಐ ಸಿ.ಆರ್.ಕೊಪ್ಪದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು





