ಶಿವಮೊಗ್ಗ ಲೈವ್.ಕಾಂ | 2 ಮೇ 2019
ಹೊಸನಗರವನ್ನು ಸಾಗರ ಮತ್ತು ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದ್ದು, ತಾಲೂಕಿನಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಆದ್ದರಿಂದ ಹೊಸನಗರವನ್ನು ಪ್ರತ್ಯೇಕ ವಿಧಾನಸಭೆ ಕ್ಷೇತ್ರ ಎಂದು ಘೋಷಣೆ ಮಾಡಬೇಕು ಅಂತಾ ಜನಜಾಗೃತಿ ಹೋರಾಟ ಸಮಿತಿ ಅಧ್ಯಕ್ಷ ಟಿ.ಆರ್.ಕೃಷ್ಣಪ್ಪ ಒತ್ತಾಯಿಸಿದ್ದಾರೆ.
ರಿಪ್ಪನ್’ಪೇಟೆಯ ವಿನಾಯಕ ಸರ್ಕಲ್ ಬಸ್ ಸ್ಟಾಪ್’ನಲ್ಲಿ, ಕಾರ್ಮಿಕರ ದಿನಾಚರಣೆ ಅಂಗವಾಗಿ ಬಹಿರಂಗ ಸಭೆ ನಡೆಸಿದ ಟಿ.ಆರ್.ಕೃಷ್ಣಪ್ಪ, ರಾಜ್ಯಕ್ಕೆ ಬೆಳಕು ನೀಡಬೇಕು ಎಂದು ಮನೆ, ಮಠ ಕಳೆದುಕೊಂಡವರೇ ಹೆಚ್ಚಿದ್ದಾರೆ. ತಾಲೂಕಿನಲ್ಲಿ ಬಹುತೇಕರು ರೈತರೇ ಇದ್ದಾರೆ. ಸ್ವಾತಂತ್ರ್ಯ ಬಂದು ಏಳು ದಶಕವಾಗಿದ್ದರೂ, ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯಾಗಿಲ್ಲ. ಆದ್ದರಿಂದ, ಹೊಸನಗರವನ್ನು ವಿಧಾನಸಭೆ ಕ್ಷೇತ್ರವನ್ನಾಗಿ ಘೋಷಣೆ ಮಾಡಬೇಕು ಎಂದು ಸ್ಪಷ್ಟಪಡಿಸಿದರು.
ಹೊಸನಗರ ತಾಲೂಕಿನಲ್ಲಿ ಜನಸಂಖ್ಯೆ ಕಡಿಮೆ ಇತ್ತು. ಹಾಗಾಗಿ ಶಿವಮೊಗ್ಗದ ಕೆಲವು ಗ್ರಾಮಗಳನ್ನು ಸೇರಿಸಿ, ಹೊಸನಗರ ವಿಧಾನಸಭೆ ಕ್ಷೇತ್ರವನ್ನಾಗಿ ಘೊಷಣೆ ಮಾಡಲಾಗಿತ್ತು. ಶಿರ್ನಾಳಿ ಚಂದ್ರಶೇಖರ್, ಬಿ.ಸ್ವಾಮಿರಾವ್, ಆಯನೂರು ಮಂಜುನಾಥ್, ಡಾ.ಜಿ.ಡಿ.ನಾರಾಯಣಪ್ಪ, ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ, ಕಾಗೋಡು ತಿಮ್ಮಪ್ಪ ಅವರು ಇಲ್ಲಿಂದ ಆಯ್ಕೆಯಾಗಿದ್ದರು. ಆದರೆ ಕ್ಷೇತ್ರದ ಅಭಿವೃದ್ದಿ ಆಗಿಲ್ಲ. ನಾರಾಯಣಪ್ಪ, ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ, ಕಾಗೋಡು ತಿಮ್ಮಪ್ಪ ಅವರು ಇಲ್ಲಿಂದ ಆಯ್ಕೆಯಾಗಿದ್ದರು. ಆದರೆ ಕ್ಷೇತ್ರದ ಅಭಿವೃದ್ದಿ ಆಗಿಲ್ಲ. ಹೀಗಿದ್ದೂ, ತಾಲೂಕನ್ನು ತೀರ್ಥಹಳ್ಳಿ ಮತ್ತು ಸಾಗರ ವಿಧಾಸನಭೆ ಕ್ಷೇತ್ರಗಳಿಗೆ ಹಂಚಿಕೆ ಮಾಡಿರುವುದರಿಂದ ಅಭಿವೃದ್ಧಿ ಮತ್ತಷ್ಟು ಮರೀಚಿಕೆಯಾಗಿದೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com

LATEST NEWS
- ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು











