ಹೊಸನಗರ ವಿಧಾನಸಭೆ ಕ್ಷೇತ್ರ ಘೋಷಣೆಗೆ ಆಗ್ರಹ, ರಿಪ್ಪನ್’ಪೇಟೆಯಲ್ಲಿ ಒಬ್ಬಂಟಿಯಾಗಿ ಪ್ರತಿಭಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 2 ಮೇ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹೊಸನಗರವನ್ನು ಸಾಗರ ಮತ್ತು ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದ್ದು, ತಾಲೂಕಿನಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಆದ್ದರಿಂದ ಹೊಸನಗರವನ್ನು ಪ್ರತ್ಯೇಕ ವಿಧಾನಸಭೆ ಕ್ಷೇತ್ರ ಎಂದು ಘೋಷಣೆ ಮಾಡಬೇಕು ಅಂತಾ ಜನಜಾಗೃತಿ ಹೋರಾಟ ಸಮಿತಿ ಅಧ್ಯಕ್ಷ ಟಿ.ಆರ್.ಕೃಷ್ಣಪ್ಪ ಒತ್ತಾಯಿಸಿದ್ದಾರೆ.

ರಿಪ್ಪನ್’ಪೇಟೆಯ ವಿನಾಯಕ ಸರ್ಕಲ್ ಬಸ್ ಸ್ಟಾಪ್’ನಲ್ಲಿ, ಕಾರ್ಮಿಕರ ದಿನಾಚರಣೆ ಅಂಗವಾಗಿ ಬಹಿರಂಗ ಸಭೆ ನಡೆಸಿದ ಟಿ.ಆರ್.ಕೃಷ್ಣಪ್ಪ, ರಾಜ್ಯಕ್ಕೆ ಬೆಳಕು ನೀಡಬೇಕು ಎಂದು ಮನೆ, ಮಠ ಕಳೆದುಕೊಂಡವರೇ ಹೆಚ್ಚಿದ್ದಾರೆ. ತಾಲೂಕಿನಲ್ಲಿ ಬಹುತೇಕರು ರೈತರೇ ಇದ್ದಾರೆ. ಸ್ವಾತಂತ್ರ್ಯ ಬಂದು ಏಳು ದಶಕವಾಗಿದ್ದರೂ, ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯಾಗಿಲ್ಲ. ಆದ್ದರಿಂದ, ಹೊಸನಗರವನ್ನು ವಿಧಾನಸಭೆ ಕ್ಷೇತ್ರವನ್ನಾಗಿ ಘೋಷಣೆ ಮಾಡಬೇಕು ಎಂದು ಸ್ಪಷ್ಟಪಡಿಸಿದರು.

ಹೊಸನಗರ ತಾಲೂಕಿನಲ್ಲಿ ಜನಸಂಖ್ಯೆ ಕಡಿಮೆ ಇತ್ತು. ಹಾಗಾಗಿ ಶಿವಮೊಗ್ಗದ ಕೆಲವು ಗ್ರಾಮಗಳನ್ನು ಸೇರಿಸಿ, ಹೊಸನಗರ ವಿಧಾನಸಭೆ ಕ್ಷೇತ್ರವನ್ನಾಗಿ ಘೊಷಣೆ ಮಾಡಲಾಗಿತ್ತು. ಶಿರ್ನಾಳಿ ಚಂದ್ರಶೇಖರ್, ಬಿ.ಸ್ವಾಮಿರಾವ್, ಆಯನೂರು ಮಂಜುನಾಥ್, ಡಾ.ಜಿ.ಡಿ.ನಾರಾಯಣಪ್ಪ, ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ, ಕಾಗೋಡು ತಿಮ್ಮಪ್ಪ ಅವರು ಇಲ್ಲಿಂದ ಆಯ್ಕೆಯಾಗಿದ್ದರು. ಆದರೆ ಕ್ಷೇತ್ರದ ಅಭಿವೃದ್ದಿ ಆಗಿಲ್ಲ. ನಾರಾಯಣಪ್ಪ, ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ, ಕಾಗೋಡು ತಿಮ್ಮಪ್ಪ ಅವರು ಇಲ್ಲಿಂದ ಆಯ್ಕೆಯಾಗಿದ್ದರು. ಆದರೆ ಕ್ಷೇತ್ರದ ಅಭಿವೃದ್ದಿ ಆಗಿಲ್ಲ. ಹೀಗಿದ್ದೂ, ತಾಲೂಕನ್ನು ತೀರ್ಥಹಳ್ಳಿ ಮತ್ತು ಸಾಗರ ವಿಧಾಸನಭೆ ಕ್ಷೇತ್ರಗಳಿಗೆ ಹಂಚಿಕೆ ಮಾಡಿರುವುದರಿಂದ ಅಭಿವೃದ್ಧಿ ಮತ್ತಷ್ಟು ಮರೀಚಿಕೆಯಾಗಿದೆ ಎಂದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment