SHIVAMOGGA LIVE NEWS | 18 JULY 2024
RAILWAY NEWS : ಹಳಿ (TRACK) ಮೇಲೆ ಬೃಹತ್ ಮರ ಬಿದ್ದಿದ್ದರಿಂದ ತಾಳುಗುಪ್ಪ – ಬೆಂಗಳೂರು ಇಂಟರ್ಸಿಟಿ ರೈಲು ಸಂಚಾರ ಸುಮಾರು 2 ಗಂಟೆ ವ್ಯತ್ಯಯವಾಗಿದೆ. ಹೊಸನಗರ ತಾಲೂಕು ಬಟಾಣಿಜೆಡ್ಡು ಬಳಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.
ಭಾರಿ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಮರ ಬಿದ್ದಿತ್ತು. ಇದನ್ನು ಗಮನಿಸಿದ ಲೋಕೋ ಪೈಲೆಟ್ ರೈಲು ನಿಲ್ಲಿಸಿದ್ದರು. ರೈಲ್ವೆ ಇಲಾಖೆಯ ಇಂಟಿರಿಯರ್ ವರ್ಕ್ ತಂಡದ ಸದಸ್ಯರು ಕೂಡಲೆ ಸ್ಥಳಕ್ಕೆ ತೆರಳಿ ಮರ ತೆರವು ಕಾರ್ಯಾಚರಣೆ ನಡೆಸಿದರು.
ಬೆಳಗ್ಗೆ 5.15ಕ್ಕೆ ತಾಳಗುಪ್ಪದಿಂದ ಹೊರಟಿದ್ದ ರೈಲು ಬೆಳಗ್ಗೆ 7 ಗಂಟೆಗೆ ಶಿವಮೊಗ್ಗ ನಿಲ್ದಾಣ ತಲುಪಬೇಕಿತ್ತು. ಆದರೆ ಬೆಳಗ್ಗೆ 9.05ಕ್ಕೆ ಶಿವಮೊಗ್ಗ ನಿಲ್ದಾಣ ತಲುಪಿದೆ. ಬೆಳಗ್ಗೆ 9.18ಕ್ಕೆ ಶಿವಮೊಗ್ಗ ನಿಲ್ದಾಣದಿಂದ ಹೊರಟಿದೆ. ಈ ರೈಲು ಇವತ್ತು ಅರಸೀಕೆರೆ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಹಾಗಾಗಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ರೈಲಿನಲ್ಲಿ ಇಲ್ಲ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯ ಪದವಿ ಕಾಲೇಜುಗಳಿಗೆ ರಜೆ ಇದ್ಯಾ? ಜಿಲ್ಲಾಡಳಿತದ ಸ್ಪಷ್ಟನೆ ಏನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200