SHIVAMOGGA LIVE NEWS | 17 JULY 2024
HOSANAGARA : ಮೂಲೆಗದ್ದೆ ಬಸ್ ನಿಲ್ದಾಣದ ಬಳಿ ಬೃಹತ್ ಮರವೊಂದು (Tree) ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದೆ. ಹಾಗಾಗಿ ಕೆಲಕಾಲ ರಾಣೆಬೆನ್ನೂರು – ಬೈಂದೂರು ನಡುವೆ ವಾಹನ ಸಂಚಾರ ಸ್ಥಗಿತವಾಗಿತ್ತು.
ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಲಗೆದ್ದ ಮಠದ ಬಸ್ ನಿಲ್ದಾಣದ ಬಳಿ ಇವತ್ತು ಬೆಳಗ್ಗೆ ಮರ ಧರೆಗುರುಳಿದೆ. ರಸ್ತೆಗೆ ಅಡ್ಡಲಾಗಿ ಮರ ಬಿದ್ದಿತ್ತು. ಹಾಗಾಗಿ ರಸ್ತೆಯ ಎರಡು ಬದಿಯಲ್ಲೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ವಿಷಯ ತಿಳಿದು ಸ್ಥಳೀಯರ ನೆರವಿನೊಂದಿಗೆ ಗ್ರಾಮ ಪಂಚಾಯಿತಿ, ಅರಣ್ಯ ಇಲಾಖೆ ಅಧಿಕಾರಿಗಳು ಮರ ತೆರವು ಕಾರ್ಯಾಚರಣೆಯಲ್ಲಿ ನಡೆಸಿದರು.




ಇದನ್ನೂ ಓದಿ ⇓
ಹೊಸನಗರದಲ್ಲಿ ಮುಂದುವರೆದ ಮಳೆ, ನೂತನ ಸೇತುವೆಯ ಪಿಚ್ಚಿಂಗ್ ಕುಸಿತ, ಎಲ್ಲೆಲ್ಲಿ ಎಷ್ಟಾಗಿದೆ ಮಳೆ?
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
