ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 10 ಸೆಪ್ಟೆಂಬರ್ 2019
ಗಣಪತಿ ಮೆರವಣಿಗೆಯಲ್ಲಿ ಕ್ಷುಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆಯಾಗಿ, ಇಬ್ಬರು ಯುವಕರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿರುವ ಯುವಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೂರ್ಯ ಮತ್ತು ಕುಮಾರ್ ಎಂಬುವವರಿಗೆ ಚಾಕು ಇರಿತಕ್ಕೆ ಒಳಗಾದವರು. ರಿಪ್ಪನ್’ಪೇಟೆಯಲ್ಲಿ ಇಂದು ಸಂಜೆ ಗಣಪತಿ ವಿಸರ್ಜನೆ ವೇಳೆ ಹೆಣ್ಣು ಮಕ್ಕಳು ನೃತ್ಯ ಮಾಡುತ್ತಿದ್ದರು. ಈ ವೇಳೆ ಕೆಲವು ಯುವಕರು ಅವರ ನಡುವೆ ಡಾನ್ಸ್ ಮಾಡಲು ಮುಂದಾಗಿದ್ದಾರೆ. ಸೂರ್ಯ ಮತ್ತು ಕುಮಾರ್ ಅವರು ಇದನ್ನು ವಿರೋಧಿಸಿದ್ದಾರೆ.
ಇದರಿಂದ ಕುಪಿತಗೊಂಡ ಯುವಕರು ಸೂರ್ಯ ಮತ್ತು ಕುಮಾರ್’ಗೆ ಚಾಕುವಿನಿಂದ ಇರಿದಿದ್ದಾರೆ. ಘಟನೆ ಸಂಬಂಧ ಧನುಷ್ ಮತ್ತು ಸುಚಿತ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದ್ದಿದ್ದಾರೆ ಎಂದು ತಿಳಿದು ಬಂದಿದೆ. ಜೋಸೆಫ್ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹಳೆ ವೈಷಮ್ಯವು ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಈ ಕುರಿತು ರಿಪ್ಪನ್’ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200