ನಿವೃತ್ತ ಯೋಧರಿಗೆ ಅದ್ಧೂರಿ ಸ್ವಾಗತ, ಆನಂದಪುರ, ರಿಪ್ಪನ್‌ಪೇಟೆಯಲ್ಲಿ ಮೆರವಣಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 JANUARY 2023

ANANDAPURA : ಸೇನೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿ ತವರಿಗೆ ಹಿಂತಿರುಗಿದ ಯೋಧ ಸುಬೇದಾರ್ ಎಂ.ಗಣಪತಿ ಅವರಿಗೆ ನಾಗರಿಕರು ಭವ್ಯ ಸ್ವಾಗತ ನೀಡಿದರು. ಯಡೇಹಳ್ಳಿಯಿಂದ ಹಿರೇಹಾರಕ ಗ್ರಾಮದವರೆಗೆ ಮೆರವಣಿಗೆ ನಡೆಸಲಾಯಿತು.

ಸೇನೆಯಲ್ಲಿ ಸುದೀರ್ಘ 28 ವರ್ಷ ಸೇವೆ ಸಲ್ಲಿಸಿರುವ ಗಣಪತಿ ಅವರು ನಿವೃತ್ತರಾಗಿ ತವರಿಗೆ ಮರಳಿದ್ದಾರೆ. ಪಂಜಾಬ್‌, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ನಾಗಲ್ಯಾಂ ಸೇರಿದಂತೆ ವಿವಿಧೆಡೆ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕೆಲಸ ಮಾಡಿದ್ದಾರೆ.

ಮಾಜಿ ಸೈನಿಕರಾದ ದಿನೇಶ್, ಚಂದ್ರಪ್ಪ ಮಣಕೊಂದೂರು, ಕಿಶೋರ್ ಬೈರಾಪುರ, ಡಾಕಪ್ಪ, ಸುಭಾಶ್ ಕೌತಳ್ಳಿ, ಪ್ರಮುಖರಾದ ದಿವಾಕರ್, ಚೌಡಪ್ಪ, ಪ್ರದೀಪ್ ಇದ್ದರು.

ರಿಪ್ಪನ್‌ಪೇಟೆಯಲ್ಲೂ ಅದ್ಧೂರಿ ಮೆರವಣಿಗೆ

28 ವರ್ಷ ಸೇವೆ ಸಲ್ಲಿಸಿ ಸೇನೆಯಿಂದ ನಿವೃತ್ತರಾಗಿ ಸ್ವಗ್ರಾಮಕ್ಕೆ ಮರಳಿದ ಸುಬೇದಾರ್‌ ಮುಕುಂದ ಬಿ.ಎಂ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಅರಸಾಳು ರೈಲ್ವೆ ನಿಲ್ದಾಣದಲ್ಲಿ ಸುಬೇದಾರ್‌ ಮುಕುಂದ ಅವರನ್ನು ಸ್ವಾಗತಿಸಿ, ಮನೆವರೆಗೆ ಮೆರವಣಿಗೆ ನಡೆಸಲಾಯಿತು. ವಿವಿಧ ಸಂಘ ಸಂಸ್ಥೆಗಳು, ಜುಮ್ಮಾ ಮಸೀದಿಯ ಪ್ರಮುಖರು ನಿವೃತ್ತ ಯೋಧನಿಗೆ ಸನ್ಮಾನಿಸಿದರು.

1995ರಲ್ಲಿ ಸೇನೆಗೆ ಸೇರ್ಪಡೆಯಾದ ಅವರು ಹೈದರಾಬಾದಿನಲ್ಲಿ ತರಬೇತಿ ಮುಗಿಸಿ, ಜಮ್ಮು ಮತ್ತು ಕಾಶ್ಮೀರ, ಗುಜರಾತ್ ರಾಜ್ಯಗಳಲ್ಲಿ ಹಾಗೂ ಡೆಹ್ರಾಡೂನ್, ಪುಣೆ ಮತ್ತು ಸಿಯಾಚಿನ್‌ನಲ್ಲಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ – ಕಾನೂನು ಇದ್ದರೂ ವ್ಯಾಪಾರಿಗಳು ಪಾಲಿಸುತ್ತಿಲ್ಲ, ಅಧಿಕಾರಿಗಳು ಪ್ರಶ್ನಿಸುತ್ತಿಲ್ಲ, ಸಾಗರದಲ್ಲಿ ಆಕ್ರೋಶ

ಮಾಜಿ ಸೈನಿಕರಾದ ಸುಬೇದಾರ್ ದಿನೇಶ್ ಕೊಡಸೆ, ಸುಬೇದಾರ್ ಮಾಲತೇಶಪ್ಪ, ಪ್ರಮುಖರಾದ ಎಂ.ಬಿ ಲಕ್ಷ್ಮಣ್ ಗೌಡ, ಗಣೇಶ್ ಕಾಮತ್, ದೇವರಾಜ್ ಕೆರೆಹಳ್ಳಿ ಸೇರಿದಂತೆ ಹಲವರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 3, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment