ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 MAY 2024
ARASALU : ದರಗೆಲೆ ತರಲು ಕಾಡಿಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ. ಹೊಸನಗರ ತಾಲೂಕು ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದ ಬಳಿ ಕಾಡಿನಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಗ್ರಾಮದ ತಿಮ್ಮಪ್ಪ (58) ಮೃತರು.
ಘಟನೆ ಸಂಭವಿಸಿದ್ದು ಹೇಗೆ?
ದರಗೆಲೆ ತರಲು ತಿಮ್ಮಪ್ಪ ಅವರು ಇವತ್ತು ಬೆಳಗ್ಗೆ ಸಮೀಪದ ಕಾಡಿಗೆ ತೆರಳಿದ್ದರು. ಈ ಸಂದರ್ಭ ಆನೆ ದಾಳಿ ನಡೆಸಿದೆ ಎನ್ನಲಾಗಿದೆ. ತಿಮ್ಮಪ್ಪ ಜೋರಾಗಿ ಕೂಗಿಕೊಂಡಿದ್ದು ಸಮೀಪದಲ್ಲೇ ದರಗೆಲೆಗೆ ಬಂದವರು ಮತ್ತು ಗ್ರಾಮಸ್ಥರು ಕೂಗು ಕೇಳಿದ ಕಡೆಗೆ ದೌಡಾಯಿಸಿದ್ದಾರೆ. ಈ ಹೊತ್ತಿಗಾಗಲೇ ದಾಳಿ ನಡೆಸಿದ್ದ ಆನೆ ಪರಾರಿಯಾಗುತ್ತಿತ್ತು. ಮರದ ಬುಡದ ಬಳಿ ತಿಮ್ಮಪ್ಪ ಮೃತದೇಹ ಪತ್ತೆಯಾಗಿದೆ ಎಂದು ಸ್ಥಳೀಯರು ಶಿವಮೊಗ್ಗ ಲೈವ್.ಕಾಂಗೆ ಮಾಹಿತಿ ನೀಡಿದ್ದಾರೆ.
ಅರಣ್ಯಾಧಿಕಾರಿಗಳು, ಗ್ರಾಮಸ್ಥರು ದೌಡು
ಕಾಡಾನೆ ದಾಳಿ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಸುತ್ತಮುತ್ತಲ ಗ್ರಾಮಗಳ ನಿವಾಸಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಎರಡ್ಮೂರು ದಿನದಿಂದ ಆನೆ ಪ್ರತ್ಯಕ್ಷವಾಗಿರುವ ಕುರಿತು ಜನರಲ್ಲಿ ಗುಸುಗುಸು ಸುದ್ದಿ ಹಬ್ಬಿತ್ತು. ಇವತ್ತು ತಿಮ್ಮಪ್ಪ ಅವರ ಮೇಲೆ ದಾಳಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಭಾಗದಲ್ಲಿ ಕಳೆದ ಒಂದರೆಡು ವರ್ಷದಿಂದ ಕಾಡಾನೆ ಹಾವಳಿ ಇದೆ. ಜಮೀನಿಗೆ ನುಗ್ಗಿ ಬೆಳೆ ಹಾನಿ ಉಂಟು ಮಾಡಿದ್ದವು.
ತಿಮ್ಮಪ್ಪ ಕುಟುಂಬದ ಸ್ಥಿತಿ ಏನು?
ಬಸವಾಪುರದ ನಿವಾಸಿ ತಿಮ್ಮಪ್ಪ ಅವರಿಗೆ ಸಣ್ಣ ಪ್ರಮಾಣದ ಜಮೀನು ಇದೆ ಎನ್ನುತ್ತಾರೆ ಸ್ಥಳೀಯರು. ಇದರ ಜೊತೆಗೆ ಕೂಲಿ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿದ್ದರು. ಪತ್ನಿ ಮತ್ತು ಮಗ ಇದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ ಹತ್ತಿ ಅಣ್ಣನಿಗೆ ಫೋನ್ ಮಾಡಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





