ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 DECEMBER 2022
ಹೊಸನಗರ : ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆ (wild elephant problem) ಹಾವಳಿಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಭತ್ತ, ಶುಂಠಿ, ಅಡಕೆ ಗಿಡಗಳು ನಾಶವಾಗಿವೆ. ನೀರಿನ ಪೈಪುಗಳನ್ನು ಕೂಡ ಅನೆಗಳು ಧ್ವಂಸ ಮಾಡಿವೆ.

ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಗಳು ಕಾಣಿಸಿಕೊಂಡಿವೆ. ಕೊಯ್ಲು ಮುಗಿಸಿ ಹಾಕಿದ್ದ ಭತ್ತ, ಹುಲ್ಲನ್ನು ಹಾನಿಗೆಡವಿವೆ. ಹೊರಬೈಲಿನ ಎಲೆಬಳ್ಳಿ ಮಂಜಪ್ಪ ಶುಂಠಿ ಮತ್ತು ಭತ್ತದ ಗದ್ದೆಗೆ ನುಗ್ಗಿ ಬೆಳೆ ಹಾನಿ ಮಾಡಿವೆ. ಗಾಮನಗದ್ದೆಯ ಹರಿಗೆಕೊಪ್ಪದ ನಾರಾಯಣಪ್ಪ ಅವರ ಜಮೀನಿನಲ್ಲಿ ಕೊಯ್ಲು ಮಾಡಿದ್ದ ಭತ್ತ ಹಾನಿಗೆಡವಿವೆ. (wild elephant problem)
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಕುಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯಕ್ಕೆ ಪ್ಲಾನ್, ಹಳ್ಳಿಗಳನ್ನು ಜನರೆ ಸೂಚಿಸಬಹುದು
ಆನೆಗಳ ಉಪಟಳಕ್ಕೆ ಮನೆಯಿಂದ ಹೊರ ಬರಲು ಜನರು ಹೆದರುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಕಾಡಾನೆಗಳ ಹಾವಳಿ ತಡೆ ಕಷ್ಟವಾಗಿದೆ.

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – SHIVAMOGGA LIVE COMMUNITY



