ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 AUGUST 2023
HOSANAGARA : ಮನೆ ಹಿಂಬದಿಯ ಬಾವಿಗೆ (Well) ಹಾರಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಹೊಸನಗರ ಪಟ್ಟಣದ ಹೊರವಲಯದ ಮಾವಿನಕೊಪ್ಪ (Mavinakoppa) ನಿವಾಸಿ ಯಶೋದಮ್ಮ (62) ಎಂಬುವವರನ್ನು ರಕ್ಷಿಸಲಾಗಿದೆ. ಅವರು ತಮ್ಮ ಮನೆಯ ಹಿಂಬದಿಯ ಬಾವಿಗೆ ಹಾರಿದ್ದಾರೆ ಎಂದು ಹೇಳಲಾಗಿತ್ತಿದೆ.
ಏನಿದು ಪ್ರಕರಣ?
ಶನಿವಾರ ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಎಲ್ಲೆಡೆ ಹುಡುಕಿದ್ದಾರೆ. ಕೊನೆಗೆ ಬಾವಿಯಲ್ಲಿ (Well) ಪರಿಶೀಲಿಸಿದಾಗ ಪೈಪ್ ಹಿಡಿದು 30 ಅಡಿ ಕೆಳಗೆ ಯಶೋದಮ್ಮ ಅವರು ನಿಂತಿರುವುದನ್ನು ಗಮನಿಸಿದ್ದಾರೆ. ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಯಶೋದಮ್ಮನನ್ನು ರಕ್ಷಿಸಿದ್ದಾರೆ. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಕೆ.ಟಿ.ರಾಜಪ್ಪ, ಹೆಚ್.ಡಿ.ಸುರೇಶ್, ಕೆ.ರವೀಂದ್ರ, ಶಂಕರೇಗೌಡ, ಬಿ.ಸಿ.ಆಂಜನೇಯ, ಭೀಷ್ಮಾಚಾರಿ ಕಮ್ಮಾರ್, ಆರ್.ಮಣಿ ಕಾರ್ಯಾಚರಣೆಯಲ್ಲಿ ಪಲ್ಗೊಂಡಿದ್ದರು.
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















