SHIVAMOGGA LIVE NEWS | 26 AUGUST 2023
HOSANAGARA : ಮನೆ ಹಿಂಬದಿಯ ಬಾವಿಗೆ (Well) ಹಾರಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಹೊಸನಗರ ಪಟ್ಟಣದ ಹೊರವಲಯದ ಮಾವಿನಕೊಪ್ಪ (Mavinakoppa) ನಿವಾಸಿ ಯಶೋದಮ್ಮ (62) ಎಂಬುವವರನ್ನು ರಕ್ಷಿಸಲಾಗಿದೆ. ಅವರು ತಮ್ಮ ಮನೆಯ ಹಿಂಬದಿಯ ಬಾವಿಗೆ ಹಾರಿದ್ದಾರೆ ಎಂದು ಹೇಳಲಾಗಿತ್ತಿದೆ.
ಏನಿದು ಪ್ರಕರಣ?
ಶನಿವಾರ ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಎಲ್ಲೆಡೆ ಹುಡುಕಿದ್ದಾರೆ. ಕೊನೆಗೆ ಬಾವಿಯಲ್ಲಿ (Well) ಪರಿಶೀಲಿಸಿದಾಗ ಪೈಪ್ ಹಿಡಿದು 30 ಅಡಿ ಕೆಳಗೆ ಯಶೋದಮ್ಮ ಅವರು ನಿಂತಿರುವುದನ್ನು ಗಮನಿಸಿದ್ದಾರೆ. ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಯಶೋದಮ್ಮನನ್ನು ರಕ್ಷಿಸಿದ್ದಾರೆ. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಕೆ.ಟಿ.ರಾಜಪ್ಪ, ಹೆಚ್.ಡಿ.ಸುರೇಶ್, ಕೆ.ರವೀಂದ್ರ, ಶಂಕರೇಗೌಡ, ಬಿ.ಸಿ.ಆಂಜನೇಯ, ಭೀಷ್ಮಾಚಾರಿ ಕಮ್ಮಾರ್, ಆರ್.ಮಣಿ ಕಾರ್ಯಾಚರಣೆಯಲ್ಲಿ ಪಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200